ಸಾರಿಗೆ ಮುಷ್ಕರ: ಬಸ್ ಅಡ್ಡಗಟ್ಟಿ ಚಾಲಕರಿಗೆ ಹಾರ ಹಾಕಿ ತರಾಟೆ

Update: 2021-04-14 11:38 GMT

ಚಾಮರಾಜನಗರ: ಸಾರಿಗೆ ನೌಕರರ ಮುಷ್ಕರ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಚಾಮರಾಜಗರದ ಗುಂಡ್ಲುಪೇಟೆಯಲ್ಲಿ ಮುಷ್ಕರದ ನಡುವೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗಳನ್ನು ಅಡ್ಡಗಟ್ಟಿದ ಮುಷ್ಕರ ನಿರತ ನೌಕರರ ಕುಟುಂಬಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 

ಮೈಸೂರಿನಿಂದ ಗುಂಡ್ಲುಪೇಟೆಗೆ ಬರುತ್ತಿದ್ದ ಬಸ್ ಗಳನ್ನು ಅಡ್ಡಗಟ್ಟಿದ ಮಹಿಳೆಯರು, ಬಸ್ ಚಲಾಯಿಸುತ್ತಿದ್ದ ಚಾಲಕ ಹಾಗೂ ನಿರ್ವಾಹಕರನ್ನು ತರಾಟೆಗೆ ತೆಗೆದುಕೊಂಡರು. ಚಾಲಕನಿಗೆ ಹೂವಿನ ಹಾರ ಹಾಕಲು ಯತ್ನಿಸಿ ಮುಷ್ಕರವಿದ್ದರೂ ಕರ್ತವ್ಯಕ್ಕೆ ಹಾಜರಾಗಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಬಳಿಕ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮೂವರು ಕೆಎಸ್ಸಾರ್ಟಿಸಿ ಸಿಬ್ಬಂದಿ ಹಾಗೂ ಅವರ ಕುಟುಂಬ ವರ್ಗದವರನ್ನು ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ಕರೆದೊಯ್ದು ಎಚ್ಚರಿಕೆ ನೀಡಿ ಕಳುಹಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News