ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಹಣ ಹಂಚಿಕೆ ಆರೋಪ: ಮೂವರು ಕಾರ್ಯಕರ್ತರ ಬಂಧನ

Update: 2021-04-14 16:46 GMT

ರಾಯಚೂರು, ಎ.14: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರಿಗೆ ಮತ ಹಾಕುವಂತೆ ಕೋರಿ ಬಹಿರಂಗವಾಗಿ ಜನರಿಗೆ ಹಣ ಹಂಚುತ್ತಿದ್ದ ಆರೋಪದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರನ್ನು ತುರ್ವಿಹಾಳ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರಾದ ನವೀನ್, ಸಚಿನ್ ಮತ್ತು ಆನಂದ ಎಂಬವರು ಬಂಧಿತರಾಗಿದ್ದು, ಇವರಿಂದ ಐದು ನೂರು ಮುಖ ಬೆಲೆಯ 81 ಸಾವಿರ ನಗದು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತುರ್ವಿಹಾಳ ಪಟ್ಟಣದ ಶ್ರೀನಿವಾಸ ಕ್ಯಾಂಪ್ ರಸ್ತೆಯ ಪಕ್ಕದಲ್ಲಿರುವ ವಾರ್ಡ್-1 ಮತ್ತು 3ರಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡುತ್ತಿದ್ದಾಗ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಇದೇ ವೇಳೆ ಸ್ಥಳಕ್ಕೆ ಧಾವಿಸಿದ ಚುನಾವಣೆ ಜಾಗೃತ ದಳದ ಸಿಬ್ಬಂದಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು, ಇಲ್ಲಿನ ತುರ್ವಿಹಾಳ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News