ಶಿವಮೊಗ್ಗ: ಸಕ್ರಿಯ ಪ್ರಕರಣಗಳ ಸಂಖ್ಯೆ 539ಕ್ಕೆ ಏರಿಕೆ

Update: 2021-04-14 16:31 GMT

ಶಿವಮೊಗ್ಗ: ಜಿಲ್ಲೆಯಲ್ಲಿ ಎಪ್ರಿಲ್‌ ತಿಂಗಳಲ್ಲಿ ಮೂರು ಮಂದಿ ಕೊರೋನದಿಂದ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆಯು 352ಕ್ಕೆ ಏರಿಕೆಯಾಗಿದೆ.

ಮಂಗಳವಾರದಂದು ರಿಪ್ಪನಪೇಟೆ ಸಮೀಪದ ಗವಟೂರು ಗ್ರಾಮದ ಗ್ರಾಪಂ ಮಾಜಿ ಸದಸ್ಯರೊಬ್ಬರು ಮೃತಪಟ್ಟಿದ್ದಾರೆ. ಇವರಿಗೆ ಕೊರೋನ ಪಾಸಿಟಿವ್‌ ಬಂದಿತ್ತು. ಉಸಿರಾಟದ ತೊಂದರೆಯಿಂದಾಗಿ ಅಸುನೀಗಿದ್ದಾರೆ.

ಇತ್ತೀಚೆಗೆ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ವ್ಯಕ್ತಿಯೊಬ್ಬರು ಹಾಗೂ ಸೊರಬ ತಾಲೂಕಿನ ಆನವಟ್ಟಿಯವರು ಕೊರೋನದಿಂದ ಮೃತಪಟ್ಟಿದ್ದರು.

58 ಜನರಲ್ಲಿ ಸೋಂಕು: ಜಿಲ್ಲೆಯಲ್ಲಿ ಬುಧವಾರ 2 ವಿದ್ಯಾರ್ಥಿಗಳು ಸೇರಿ 58 ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿವೆ. 37 ಜನ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 539ಕ್ಕೆ ಏರಿಕೆಯಾಗಿದೆ. 

1,435 ಜನರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆ ಒಳಪಡಿಸಿದ್ದು, 2,147 ನೆಗೆಟಿವ್‌ ಬಂದಿವೆ. ಶಿವಮೊಗ್ಗ ತಾಲೂಕಿನಲ್ಲಿ26, ಭದ್ರಾವತಿ 3, ಶಿಕಾರಿಪುರ 1, ತೀರ್ಥಹಳ್ಳಿ 8, ಸೊರಬ  5, ಹೊಸನಗರ 14, ಹೊರ ಜಿಲ್ಲೆಯ 1 ಪ್ರಕರಣ ದೃಢಪಟ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News