ನಾಗರಿಕ ಬಂದೂಕು ತರಬೇತಿ ಶಿಬಿರದ ಪ್ರಮಾಣಪತ್ರ ವಿತರಣೆ

Update: 2021-04-14 16:33 GMT

ಉಡುಪಿ, ಎ.14: ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಳ್ಳ ಲಾದ 2020- 2021ನೆ ಸಾಲಿನ ನಾಗರಿಕ ಬಂದೂಕು ತರಬೇತಿ ಶಿಬಿರದ ಪ್ರಮಾಣ ಪತ್ರ ವಿತರಣಾ ಸಮಾರಂಭವು ಎ.12ರಂದು ಉಡುಪಿ ಚಂದು ಮೈದಾನದಲ್ಲಿ ಜರಗಿತು.

ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ತಂಡದ ವತಿಯಿಂದ ನಿರ್ಮಿಸಿದ ಸುಮಾರು 12ಸಾವಿರ ಲೀಟರ್ ಅಂಡರ್ ಗ್ರೌಂಡ್ ವಾಟರ್ ಟ್ಯಾಂಕನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ರಾಘವೇಂದ್ರ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸ ಲಾಯಿತು. ಇಂಜಿನಿಯರ್ ಶ್ರೀಪಾಂಡುರಂಗ ಆಚಾರ್ ಅವರನ್ನು ಸನ್ಮಾನಿಸ ಲಾಯಿತು. ಕೃಷ್ಣಪ್ರಸಾದ ಶೆಟ್ಟಿ ಸ್ವಾಗತಿಸಿದರು. ಲಾರೆನ್ಸ್ ಫುರ್ಟಾಡೋ ಕಾರ್ಯಕ್ರಮ ನಿರೂಪಿಸಿದರು. ತಂಡದ ನಾಯಕ ನಂದಕಿಶೋರ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News