ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ವಾಪಸ್ಸಾಗುವವರಿಗೆ ಹೋಂ ಕ್ವಾರಂಟೈನ್, ಕೋವಿಡ್ ಟೆಸ್ಟ್ ಕಡ್ಡಾಯ: ಡಾ.ಸುಧಾಕರ್

Update: 2021-04-15 08:20 GMT

ಬೆಂಗಳೂರು, ಎ.15: ಉತ್ತರಾಖಂಡದ ರಾಜ್ಯದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳು ವಾಪಸ್ಸಾದ ಬಳಿಕ ಕಡ್ಡಾಯವಾಗಿ ಕಡ್ಡಾಯವಾಗಿ ತಮ್ಮ ಮನೆಗಳಲ್ಲಿ ಪ್ರತ್ಯೇಕವಾಗಿರಬೇಕು ಹಾಗೂ ಕೋವಿಡ್-19 ಪರೀಕ್ಷೆಗೆ ಒಳಪಡಬೇಕು ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಕುಂಭಮೇಳ ಮೇಳಕ್ಕೆ ತೆರಳಿ ಹಿಂದಿರುಗಿದವರು ಕೊರೋನ ಪರೀಕ್ಷೆ ವರದಿ  ನೆಗಟಿವ್ ಬಂದ ನಂತರವಷ್ಟೇ ತಮ್ಮ ಎಂದಿನ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News