ಕೊರೋನ ನಾಗಾಲೋಟ: ರಾಜ್ಯದಲ್ಲೇ ಮೊದಲ ಬಾರಿಗೆ ಒಂದೇ ದಿನ 14 ಸಾವಿರಕ್ಕೂ ಅಧಿಕ ಪಾಸಿಟಿವ್

Update: 2021-04-15 14:22 GMT

ಬೆಂಗಳೂರು, ಎ.15: ರಾಜ್ಯದಲ್ಲಿ ಕೊರೋನ ಎರಡನೇ ಅಲೆ ಆರ್ಭಟಿಸುತ್ತಿದ್ದು, ಇದೇ ಮೊದಲ ಬಾರಿಗೆ 14,738 ಕೊರೋನ ಪ್ರಕರಣಗಳು ವರದಿಯಾಗಿದೆ. 66 ಜನರು ಸೋಂಕಿಗೆ ಬಲಿಯಾಗಿದ್ದು, 3,591 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 11,09,650ಕ್ಕೆ ತಲುಪಿದ್ದು, 555 ಜನ ಸೋಂಕಿತರು ಐಸಿಯುನಲ್ಲಿದ್ದಾರೆ.

ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 13,112ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 96,561ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

66 ಸೋಂಕಿತರು ಬಲಿ: ಬಳ್ಳಾರಿ 6, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 30, ಬೀದರ್ 2, ಧಾರವಾಡ 3, ಹಾಸನ 4, ಕಲಬುರಗಿ 1, ಕೋಲಾರ 1, ಮೈಸೂರು 5, ರಾಮನಗರ 1, ಶಿವಮೊಗ್ಗ 1, ತುಮಕೂರು 2, ಉತ್ತರ ಕನ್ನಡ 2, ವಿಜಯಪುರ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 14,738 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 29, ಬಳ್ಳಾರಿ 200, ಬೆಳಗಾವಿ 135, ಬೆಂಗಳೂರು ಗ್ರಾಮಾಂತರ 171, ಬೆಂಗಳೂರು ನಗರ 10497, ಬೀದರ್ 363, ಚಾಮರಾಜನಗರ 39, ಚಿಕ್ಕಬಳ್ಳಾಪುರ 127, ಚಿಕ್ಕಮಗಳೂರು 62, ಚಿತ್ರದುರ್ಗ 33, ದಕ್ಷಿಣ ಕನ್ನಡ 166, ದಾವಣಗೆರೆ 60, ಧಾರವಾಡ 179, ಗದಗ 34, ಹಾಸನ 186, ಹಾವೇರಿ 27, ಕಲಬುರಗಿ 624, ಕೊಡಗು 66, ಕೋಲಾರ 89, ಕೊಪ್ಪಳ 118, ಮಂಡ್ಯ 211, ಮೈಸೂರು 327, ರಾಯಚೂರು 48, ರಾಮನಗರ 62, ಶಿವಮೊಗ್ಗ 74, ತುಮಕೂರು 387, ಉಡುಪಿ 111, ಉತ್ತರ ಕನ್ನಡ 89, ವಿಜಯಪುರ 136, ಯಾದಗಿರಿ ಜಿಲ್ಲೆಯಲ್ಲಿ 88 ಪ್ರಕರಣಗಳು ಪತ್ತೆಯಾಗಿವೆ.

ರಾಜಧಾನಿಯಲ್ಲಿ 10,497 ಕೊರೋನ ಪ್ರಕರಣ ದೃಢ

ರಾಜಧಾನಿಯಲ್ಲಿ ಗುರುವಾರದಂದು 10,497 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 30 ಜನರು ಮೃತಪಟ್ಟಿದ್ದಾರೆ. 1807 ಸೋಂಕಿತರು ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 5,12,521 ಕೊರೋನ ಸೋಂಕಿತರು ದೃಢಪಟ್ಟಿದ್ದು, 4,963 ಜನರು ಸೋಂಕಿಗೆ ಬಲಿಯಾಗಿದ್ದಾರೆ. 4,35,730 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News