ಸಾಹಿತಿ ಮಮ್ತಾಜ್ ಬೇಗಂಗೆ ಭಾವಪೂರ್ಣ ಶ್ರದ್ಧಾಂಜಲಿ

Update: 2021-04-15 14:32 GMT

ಪು, ಎ.15: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಘಟಕದ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ಸಾಹಿತಿ, ಲೇಖಕಿ ಮತ್ತು ಸಮಿತಿ ಸದಸ್ಯೆ ಮಮ್ತಾಜ್ ಬೇಗಮ್‌ರವರಿಗೆ ಭಾವಪೂರ್ಣ ಶೃದ್ಧಾಂಜಲಿ ಕಾರ್ಯಕ್ರಮ ಕಾಪು ರೋಟರಿ ಸಭಾಭವನದಲ್ಲಿ ಬುಧವಾರ ಜರಗಿತು.

ಕಸಾಪ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ ಸಾಹಿತ್ಯ ಕ್ಷೇತ್ರದಲ್ಲಿ ಕೈಯಾಡಿಸಿದ ಈ ಭಾಗದ ಪ್ರಪ್ರಥಮ ಮುಸ್ಲಿಮ್ ಮಹಿಳೆ ಮಮ್ತಾಜ್ ಬೇಗಂ. ಅವರ ದಿಟ್ಟತನ ಮತ್ತು ನಿಲುವುಗಳು ಕಾವ್ಯ, ಗ್ರಂಥ, ಲೇಖನಗಳ ರೂಪದಲ್ಲಿ ಸಾತ್ಯಕ್ಷೇತ್ರವನ್ನು ಶ್ರೀಮಂತಗೊಳಿಸಿದೆ. ಅವರ ಅಗಲು ವಿಕೆ ಜಿಲ್ಲಾ ಸಾಹಿತ್ಯ ವಲಯಕ್ಕೆ ತುಂಬಲಾರದ ನಷ್ಠ ಎಂದರು.

ಅಧ್ಯಕ್ಷತೆಯನ್ನು ಕಸಾಪ ಕಾಪು ತಾಲೂಕು ಘಟದ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಸಂತಾಪ ಸೂಚನಾ ನಿರ್ಣಯ ಮಂಡಿಸಿದರು.

ಉಪನ್ಯಾಸಕ ನೀಲಾನಂದ ನಾಯ್ಕಾ ಮಾತನಾಡಿದರು. ಸಾಹಿತ್ಯ ಪರಿಷತ್ತು ಸದಸ್ಯ ದೇವದಾಸ್ ಹೆಬ್ಬಾರ್ ಕಟ್ಟಿಂಗೇರಿ, ಜಿಲ್ಲಾ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಕೆ.ಸದಾಶಿವ ಭಟ್, ಪ್ರಜ್ಞಾ ಮಾರ್ಪಳ್ಳಿ, ಕಾರ್ಯದರ್ಶಿ ವಿದ್ಯಾ ಅಮ್ಮಣ್ಣಾಯ ಉಪಸ್ಥಿತರಿದ್ದರು. ಕಾರ್ಯದರ್ಶಿ ವಿದ್ಯಾಧರ್ ಪುರಾಣಿಕ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News