ಸಿಡಿಲು ಬಡಿದು ಮೃತಪಟ್ಟ ರೈತನ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ

Update: 2021-04-16 13:51 GMT

ಮುಂಡಗೋಡ: ಎ.12 ರಂದು ಮೈನಳ್ಳಿ ಗ್ರಾ.ಪಂ ವ್ಯಾಪ್ತಿಯ ಕಾಳೆಕಾರ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದ ರೈತ ಘಾಟು ಶಿಂದೆ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸರಕಾರದಿಂದ ಮಂಜೂರ ಮಾಡಿಸಿದ ಐದು ಲಕ್ಷ ರೂ ಪರಿಹಾರದ ಚೆಕ್ ಅನ್ನು ಸಚಿವ ಶಿವರಾಮ ಹೆಬ್ಬಾರ ಕುಟುಂಬಸ್ಥರಿಗೆ ನೀಡಿದರು.

ನಂತರ ಮೈನಳ್ಳಿ ಗ್ರಾಮದಲ್ಲಿ 34 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಪಶು ಆಸ್ಪತ್ರೆಗೆ, ಮೈನಳ್ಳಿ ಗ್ರಾಮದಲ್ಲಿ 67 ಲಕ್ಷ ರೂ ವೆಚ್ಚದ ಹಾಗೂ ಶಿಡ್ಲಗುಂಡಿ ಗ್ರಾಮದಲ್ಲಿ 26 ಲಕ್ಷ ರೂ ವೆಚ್ಚದ ಜಲಜೀವನ ಮಶಿನ ಯೋಜನೆಯ ಮನೆ ಮನೆಗೆ ಕಾರ್ಯಾತ್ಮಕ ನಲ್ಲಿ ನೀರು ಸಂಪರ್ಕ ಕಮಾಗಾರಿಗೆ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ವಾಕರಸಾ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ, ಜಿ.ಪಂ ಸದಸ್ಯ ಎಲ್.ಟಿ.ಪಾಟೀಲ ತಹಶೀಲ್ದಾರ ಶ್ರೀಧರ ಮುಂದಲಮನಿ, ಎಪಿಎಮ್‍ಸಿ ಮಾಜಿ ಅಧ್ಯಕ್ಷ ದೇವು ಪಾಟೀಲ, ಬಿಜೆಪಿ ಘಟಕಾಧ್ಯಕ್ಷ ನಾಗಭೂಷಣ ಹಾವಣಗಿ, ಸಿ.ಕೆ. ಅಶೋಕ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News