ಅಭ್ಯರ್ಥಿ ಕೋವಿಡ್-19ನಿಂದಾಗಿ ನಿಧನ: ಪಶ್ಚಿಮಬಂಗಾಳದ ಜಂಗೀಪುರ ಕ್ಷೇತ್ರದ ಚುನಾವಣೆ ಮುಂದೂಡಿಕೆ

Update: 2021-04-17 12:08 GMT

ಕೋಲ್ಕತಾ: ಕೋವಿಡ್ -19 ನಿಂದಾಗಿ ಕ್ರಾಂತಿಕಾರಿ ಸಮಾಜವಾದಿ ಪಕ್ಷದ (ಆರ್‌ಎಸ್‌ಪಿ) ಅಭ್ಯರ್ಥಿ ಪ್ರದೀಪ್ ಕುಮಾರ್ ನಂದಿ ನಿಧನರಾದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಪಶ್ಚಿಮಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಜಂಗೀಪುರ ಅಸೆಂಬ್ಲಿ ಕ್ಷೇತ್ರಕ್ಕೆ ನಡೆಯಬೇಕಾಗಿದ್ದ ಚುನಾವಣೆಯನ್ನು ಶನಿವಾರ ಮುಂದೂಡಿದೆ

ಚುನಾವಣಾ ಆಯೋಗವು ಮುಂದಿನ ದಿನಗಳಲ್ಲಿ ಹೊಸ ಮತದಾನದ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

ಜನರ ಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಗಳ ಪ್ರಕಾರ, ಮಾನ್ಯತೆ ಪಡೆದ ಪಕ್ಷದ ಅಭ್ಯರ್ಥಿಯೊಬ್ಬರು ನಿಧನರಾದರೆ, ಪಕ್ಷವು ಹೊಸ ಅಭ್ಯರ್ಥಿಯನ್ನು ನಿರ್ಧರಿಸಲು ಅನುವು ಮಾಡಿಕೊಡಲು ಮತದಾನವನ್ನು ಮುಂದೂಡಲಾಗುತ್ತದೆ. ಹೊಸ ಅಭ್ಯರ್ಥಿಯು (ಆತ  ಅಥವಾ ಆಕೆ) ನಾಮಪತ್ರವನ್ನು ಸಲ್ಲಿಸುತ್ತಾನೆ ಮತ್ತು ದಾಖಲೆಗಳ ಪರಿಶೀಲನೆಯ ಸಂಪೂರ್ಣ ಪ್ರಕ್ರಿಯೆ ಹಾಗೂ ನಾಮನಿರ್ದೇಶನವನ್ನು ಹಿಂತೆಗೆದುಕೊಳ್ಳುವ ಅವಕಾಶವನ್ನು ಪಡೆಯುತ್ತಾನೆ.

ಪ್ರದೀಪ್ ಕುಮಾರ್ ನಂದಿ ಅವರು ಶುಕ್ರವಾರ ಬೆರ್ಹಾಂಪುರದ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News