ಕೋವಿಡ್ ಹಿನ್ನೆಲೆ: ಪಶ್ಚಿಮಬಂಗಾಳದಲ್ಲಿ ತನ್ನ ಎಲ್ಲ ರ‍್ಯಾಲಿ ರದ್ದುಪಡಿಸಿದ ರಾಹುಲ್ ಗಾಂಧಿ

Update: 2021-04-18 06:12 GMT

ಹೊಸದಿಲ್ಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನ ವೈರಸ್ ಅಟ್ಟಹಾಸ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಪಶ್ಚಿಮಬಂಗಾಳದಲ್ಲಿ ತಾನು ಭಾಗವಹಿಸಬೇಕಾಗಿದ್ದ ಎಲ್ಲ ರ‍್ಯಾಲಿಗಳನ್ನು ರದ್ದುಪಡಿಸಿದ್ದಾರೆ. ಈ ವಿಚಾರವನ್ನು ಟ್ವಿಟರ್ ಮೂಲಕ ಬಹಿರಂಗಪಡಿಸಿದ್ದಾರೆ.

ಕೋವಿಡ್ ಪರಿಸ್ಥಿತಿಯ ದೃಷ್ಟಿಯಿಂದ ಪಶ್ಚಿಮಬಂಗಾಳದಲ್ಲಿ ನನ್ನ ಎಲ್ಲ ಸಾರ್ವಜನಿಕ ರ‍್ಯಾಲಿಗಳನ್ನು ಸ್ಥಗಿತಗೊಳಿಸುತ್ತಿದ್ದೇನೆ. ಪ್ರಸ್ತುತ ಸಂದರ್ಭಗಳಲ್ಲಿ ದೊಡ್ಡ ಸಾರ್ವಜನಿಕ ರ‍್ಯಾಲಿಗಳನ್ನು ನಡೆಸುವ ಪರಿಣಾಮಗಳ ಬಗ್ಗೆ ಎಲ್ಲ ರಾಜಕೀಯ ಮುಖಂಡರು ಆಳವಾಗಿ ಯೋಚಿಸುವಂತೆ ಸಲಹೆ ನೀಡುತ್ತೇನೆ ಎಂದು ರಾಹುಲ್ ಟ್ವೀಟಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News