ತುಳು ಚಿತ್ರ ನಿರ್ದೇಶಕ ರಘು ಶೆಟ್ಟಿ ನಿಧನ
Update: 2021-04-18 06:53 GMT
ಮಂಗಳೂರು, ಎ.18: ತುಳು ಚಿತ್ರರಂಗದ ಯುವ ನಿರ್ದೇಶಕ ರಘು ಶೆಟ್ಟಿ(39) ನಗರದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೂಡುಬಿದಿರೆಯವರಾದ ರಘು ಶೆಟ್ಟಿ 'ಅರ್ಜುನ್ ವೆಡ್ಸ್ ಅಮೃತ' ಎಂಬ ತುಳು ಸಿನೆಮಾವನ್ನು ನಿರ್ದೇಶಿಸಿದ್ದರು. ಈ ನಡುವೆ ಕನ್ನಡ ಚಿತ್ರವೊಂದರ ನಿರ್ದೇಶನಕ್ಕೆ ಸಂಬಂಧಿಸಿ ಅವರು ಸಿದ್ಧತೆಯಲ್ಲಿ ತೊಡಗಿದ್ದರು.
ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ.