ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ: ಪ್ರಧಾನಿಗೆ ಕಪಿಲ್ ಸಿಬಲ್ ಒತ್ತಾಯ

Update: 2021-04-18 07:36 GMT

ಹೊಸದಿಲ್ಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳು ವೇಗವಾಗಿ ಪಸರಿಸುತ್ತಿರುವುದರಿಂದ ದೇಶದಲ್ಲಿ ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರು ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಚುನಾವಣಾ ರ್ಯಾಲಿಗಳನ್ನು ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಚೇತರಿಕೆಗಿಂತ ವೇಗವಾಗಿ ಸೋಂಕುಗಳು ಹರಡುತ್ತಿವೆ. ಮೋದಿಜೀ ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ. ಚುನಾವಣಾ ಆಯೋಗವು ರ್ಯಾಲಿಗಳನ್ನು ನಿರ್ಬಂಧಿಸಬೇಕು. ನ್ಯಾಯಾಲಯಗಳು ಜನರ ಜೀವವನ್ನು ಉಳಿಸಬೇಕು ಎಂದು ಕಪಿಲ್ ಸಿಬಲ್ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News