ಅಪಪ್ರಚಾರವೇ ಕಾಂಗ್ರೆಸ್ ಜೀವಾಳ: ಕುಯಿಲಾಡಿ ಸುರೇಶ್ ನಾಯಕ್

Update: 2021-04-18 11:57 GMT

ಉಡುಪಿ, ಎ.18: ಕೇಂದ್ರ ಸರಕಾರದ ಆಹಾರ ಭದ್ರತಾ ಕಾಯ್ದೆಯನ್ವಯ ರಾಜ್ಯದಲ್ಲಿ ಜಾರಿಯಲ್ಲಿರುವ ಅನ್ನ ಭಾಗ್ಯ ಯೋಜನೆಯನ್ನು ಕಾಂಗ್ರೆಸ್ ತನ್ನದೇ ಸಾಧನೆ ಎಂಬಂತೆ ಬಿಂಬಿಸುತ್ತಿರುವುದು ವಿಷಾದನೀಯ ಎಂದು ಉಡುಪಿ ಜಿಲ್ಲಾ ಬಿಜೆಪಿ ಟೀಕಿಸಿದೆ.

ಪ್ರತೀ ಕೆಜಿ ಅಕ್ಕಿಗೆ 29ರೂ.ನಂತೆ ಕೇಂದ್ರ ಸರಕಾರ ಭರಿಸುತ್ತಿದ್ದರೂ, ರಾಜ್ಯದ ಪಾಲು ಕೇವಲ 3 ರೂ. ಭರಿಸಿ ಅನ್ನಭಾಗ್ಯ ಯೋಜನೆ ತನ್ನದೇ ಸಾಧನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಂಡಿರುವುದು ನಾಚಿಕೆಗೇಡಿನ ವಿಚಾರವಾಗಿದೆ. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ರಾಜ್ಯ ದಲ್ಲಿ ಜಾರಿಗೆ ಬಂದಿದ್ದ ಇಂದಿರಾ ಕ್ಯಾಂಟೀನ್ ಯೋಜನೆಯಲ್ಲಿ ಲಕ್ಷಾಂತರ ರೂ. ಹಗರಣ ನಡೆದಿರುವುದನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಮರೆತಂತಿದೆ. ಕಾಂಗ್ರೆಸ್ ಕೊರೋನಾ ನಿರ್ವಹಣೆಯ ವಿಚಾರದಲ್ಲೂ ರಾಜಕೀಯ ದೃಷ್ಟಿ ಕೋನದ ಅಪಸ್ವರ ಎತ್ತುತ್ತಿರುವುದು ಖಂಡನೀಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News