ಕೋಲ್ಕತಾದಲ್ಲಿ ಇನ್ನು ಮುಂದೆ ಮಮತಾ ಬ್ಯಾನರ್ಜಿ ಚುನಾವಣಾ ಪ್ರಚಾರ ನಡೆಸುವುದಿಲ್ಲ: ಟಿಎಂಸಿ

Update: 2021-04-19 05:03 GMT

ಕೋಲ್ಕತಾ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೋಲ್ಕತಾದಲ್ಲಿ ಇನ್ನು ಮುಂದೆ ಚುನಾವಣಾ ಪ್ರಚಾರ ನಡೆಸುವುದಿಲ್ಲ. ರಾಜ್ಯ ರಾಜಧಾನಿಯಲ್ಲಿ ನಡೆಯುವ ಪ್ರಚಾರದ ಕೊನೆಯ ದಿನವಾದ ಎಪ್ರಿಲ್ 26ರಂದು ಸಾಂಕೇತಿಕವಾಗಿ ಸಭೆ ನಡೆಸಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್  ಸಂಸದ ಡೆರೆಕ್ ಒಬ್ರಿಯಾನ್ ರವಿವಾರ ಟ್ವೀಟಿಸಿದ್ದಾರೆ.

ಮಮತಾ ಬ್ಯಾನರ್ಜಿ ಇನ್ನು ಮುಂದೆ ಕೋಲ್ಕತಾದಲ್ಲಿ ಪ್ರಚಾರ ನಡೆಸುವುದಿಲ್ಲ. ಎಪ್ರಿಲ್ 26ರಂದು ಪ್ರಚಾರದ ಕೊನೆಯ ದಿನದಂದು ಏಕೈಕ ಸಾಂಕೇತಿಕ ಸಭೆ ನಡೆಸಲಿದ್ದಾರೆ.  ಎಲ್ಲ ಜಿಲ್ಲೆಗಳಲ್ಲಿ ನಿಗದಿಯಾಗಿರುವ ಸಮಯವನ್ನು ಕಡಿತಗೊಳಿಸಲಾಗಿದ್ದು, ಕೇವಲ 30 ನಿಮಿಷಕ್ಕೆ ನಿರ್ಬಂಧಿಸಲಾಗಿದೆ ಎಂದು ರಾಜ್ಯಸಭಾ ಸಂಸದ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಕೇಸ್ ಗಳ ಹಿನ್ನೆಲೆಯಲ್ಲಿ ರವಿವಾರ ಪ್ರತಿಕ್ರಿಯಿಸಿರುವ ಮಮತಾ, ತನ್ನ ಪಕ್ಷವು ಕೋಲ್ಕತಾದಲ್ಲಿ ಸಣ್ಣ ಸಭೆಗಳನ್ನು ನಡೆಸಲಿದೆ. ಉಳಿದ ಮೂರು ಹಂತಗಳಲ್ಲಿ ಚುನಾವಣೆ ನಡೆಯುವ ಜಿಲ್ಲೆಗಳಲ್ಲಿ ಕಿರು ಭಾಷಣಗಳನ್ನು ಮಾಡುವೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News