251 ಮಂದಿ ತರಬೇತಿ ಸಿಬ್ಬಂದಿಯನ್ನು ಆಯ್ಕೆ ಪಟ್ಟಿಯಿಂದ ಕೈಬಿಟ್ಟ ಸಾರಿಗೆ ಇಲಾಖೆ

Update: 2021-04-19 10:07 GMT

ಬೆಂಗಳೂರು, ಎ.19: ಮುಷ್ಕರನಿರತ 251 ತರಬೇತಿ ಸಿಬ್ಬಂದಿಯನ್ನು ಆಯ್ಕೆ ಪಟ್ಟಿಯಿಂದ ಕೈಬಿಟ್ಟಿರುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಕಟನೆಯಲ್ಲಿ ತಿಳಿಸಿದೆ.

ಮುಷ್ಕರನಿರತರಾಗಿದ್ದ ತರಬೇತಿ ಸಿಬ್ಬಂದಿಯನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ಅವರು ಕರ್ತವ್ಯಕ್ಕೆ ಹಾಜರಾಗದೆ ಅನಧಿಕೃತವಾಗಿ ಗೈರುಹಾಜರಾಗಿದ್ದಾರೆ. ಆ ಮೂಲಕ ಸಾರ್ವಜನಿಕ ಪ್ರಯಾಣಿಕರಿಗೆ ಸಾರಿಗೆ ಸೇವೆಯಲ್ಲಿ ವ್ಯತ್ಯಯವುಂಟಾಗಲು ಕಾರಣರಾಗಿದ್ದಾರೆ. ಅದಕ್ಕಾಗಿ 251 ಮಂದಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆಯ್ಕೆ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News