ಬಂದರ್ ದಕ್ಕೆಯಲ್ಲಿ ಅಪರಿಚಿತ ಮೃತದೇಹ ಪತ್ತೆ

Update: 2021-04-19 17:17 GMT

ಮಂಗಳೂರು,ಎ.19: ನಗರದ ಬಂದರ್ ದಕ್ಕೆಯಲ್ಲಿ ಎ.16ರಂದು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಸುಮಾರು 50ರಿಂದ 60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯು ಮೃತಪಟ್ಟಿದ್ದು, ವಾರಸುದಾರರಿದ್ದಲ್ಲಿ ಪಾಂಡೇಶ್ವರ ಪೊಲೀಸರನ್ನು ಸಂಪರ್ಕಿಸಬಹುದಾಗಿದೆ.

ಸುಮಾರು 5.5 ಅಡಿ ಎತ್ತರದ, ಸಾಧಾರಣ ಶರೀರದ, ಗೋದಿ ಮೈಬಣ್ಣದ ಈ ವ್ಯಕ್ತಿಯು ದಕ್ಷಿಣ ದಕ್ಕೆಯ ನಿರಾಶ್ರಿತರ ಕೇಂದ್ರದ ಬಳಿ ಅಸ್ವಸ್ಥ ಸ್ಥಿತಿಯಲ್ಲಿರುವುದನ್ನು ಕಂಡ ಪಾಂಡೇಶ್ವರ ಠಾಣೆಯ ಪೊಲೀಸರು ತಕ್ಷಣ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಎ.17ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News