ಉಡುಪಿ: ​ಸಿಡಿಲು ಬಡಿದು ಹಾನಿ

Update: 2021-04-20 15:29 GMT

ಉಡುಪಿ, ಎ.20: ಕಾರ್ಕಳ ತಾಲೂಕು ಮರ್ಣೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಿನ್ನೆ ರಾತ್ರಿ ಸಿಡಿಲು ಬಡಿದು ಭಾಗಶ: ಹಾನಿಯಾಗಿದ್ದು ಸುಮಾರು 10,000ರೂ. ನಷ್ಟ ಉಂಟಾಗಿದೆ. ಅದೇ ರೀತಿ ಶಿರ್ಲಾಲು ಗ್ರಾಮದ ಸುಮತಿ ಪೂಜಾರ್ತಿ ಎಂಬವರ ಮನೆಗೂ ಸಿಡಿಲು ಬಡಿದಿದ್ದು ಭಾಗಶ: ಹಾನಿಯಾಗಿದೆ.

ಕುಂದಾಪುರ ತಾಲೂಕು ಹೆಂಗವಳ್ಳಿ ಗ್ರಾಮದ ಶೇಖರ ಶೆಟ್ಟಿ ಎಂಬವರ ತೋಟಗಾರಿಕಾ ಬೆಳೆ ಗಾಳಿ-ಮಳೆಯಿಂದ ಹಾನಿಗೊಂಡಿದ್ದು, 20 ಸಾವಿರದಷ್ಟು ನಷ್ಟ ಉಂಟಾಗಿರುವುದಾಗಿ ಇಲ್ಲಿಗೆ ಬಂದಿರುವ ವರದಿಗಳು ತಿಳಿಸಿವೆ.

ಗುಡುಗು-ಸಿಡಿಲು: ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು-ಸಿಡಿಲಿನೊಂದಿಗೆ ಬಲವಾದ ಗಾಳಿ ಬೀಸುವ ಮುನ್ಸೂಚನೆಯನ್ನು ಬೆಂಗಳೂರಿನ ಹವಾಮಾನ ಕೇಂದ್ರ ನೀಡಿದೆ. ಅಲ್ಲಲ್ಲಿ ಮಳೆಯೂ ಬೀಳುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News