ತೀರ್ಥಹಳ್ಳಿ-ಕುಂದಾಪುರ ರಾ.ಹೆ. 50ರಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

Update: 2021-04-21 11:25 GMT

ಶಿವಮೊಗ್ಗ ,ಎ.21: ತೀರ್ಥಹಳ್ಳಿ- ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರೆ ಘಾಟ್‌ನ ಎರಡು ಭಾಗದಲ್ಲಿ 1500 ಮೀ ಕಾಂಕ್ರೀಟ್ ಪೇವ್‌ಮೆಂಟ್ ಕಾಮಗಾರಿ ಆರಂಭಿಸುವುದರಿಂದ ಈ ರಸ್ತೆಯ ಮೂಲಕ ವಾಹನಗಳ ಸಂಚಾರವನ್ನು 22/04/2021 ರಿಂದ 05/06/2021 ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆಯನ್ನು ಮಾಡಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶಿಸಿದ್ದಾರೆ.

ರಾ.ಹೆ.-52 ರಿಂದ ತೀರ್ಥಹಳ್ಳಿ ಮೂಲಕ ಕುಂದಾಪುರಕ್ಕೆ ಹೋಗುವ ಲಘು ಹಾಗೂ ಮಧ್ಯಮ ವಾಹನಗಳು ತೀರ್ಥಹಳ್ಳಿ-ಕಾನಗೋಡು-ನಗರ-ಕೊಲ್ಲೂರು-ಕುಂದಾಪುರ ರಸ್ತೆ, ತೀರ್ಥಹಳ್ಳಿ-ಯಡೂರು-ಹುಲಿಕಲ್ ಕುಂದಾಪುರಕ್ಕೆ ಹೋಗುವ ಲಘು ಹಾಗೂ ಮಧ್ಯಮ ವಾಹನಗಳು ತೀರ್ಥಹಳ್ಳಿ-ಯಡೂರು-ಮಾಸ್ತಿಕಟ್ಟೆ-ನಗರ-ಕೊಲ್ಲೂರು-ಕುಂದಾಪುರ ರಸ್ತೆ, ಶಿವಮೊಗ್ಗ/ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರಕ್ಕೆ ಹೋಗುವ ವಾಹನಗಳು ಹೊಸನಗರ-ನಗರ-ಕೊಲ್ಲೂರು-ಕುಂದಾಪುರ ರಸ್ತೆ, ಶಿವಮೊಗ್ಗ, ಸಾಗರ ಹಾಗೂ ತೀರ್ಥಹಳ್ಳಿ ಕಡೆಯಿಂದ ಕುಂದಾಪುರಕ್ಕೆ ಹೋಗುವ ಭಾರಿ ಪ್ರಮಾಣದ ವಾಹನಗಳು ಬಟ್ಟೆಮಲ್ಲಪ್ಪ-ಸಾಗರ-ಗೇರುಸೊಪ್ಪ-ಹೊನ್ನಾವರ-ಕುಂದಾಪುರ ರಸ್ತೆಯ ಮೂಲಕ ಸಂಚರಿಸುವಂತೆ ಅದೇಶದಲ್ಲಿ ತಿಳಿಸಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News