ಪ್ರತ್ಯೇಕ ಪ್ರಕರಣ : ಮೂವರ ಆತ್ಮಹತ್ಯೆ

Update: 2021-04-21 16:32 GMT

ಅಜೆಕಾರು, ಎ.21: ವಿಪರೀತ ಮದ್ಯ ಸೇವಿಸುವ ಚಟ ಹೊಂದಿದ್ದ ಕೆರ್ವಾಶೆ ಗ್ರಾಮ ಅರ್ಥಬೆಟ್ಟು ನಿವಾಸಿ ಕೃಷಿಕ ಉಮೇಶ ಪೂಜಾರಿ(48) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಕೃಷಿಗೆ ಬಳಸುವ ಕೀಟನಾಶಕವನ್ನು ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರ್ವ: ವಿಪರೀತ ಮದ್ಯಪಾನ ಮಾಡುವ ಚಟದಿಂದ ಜೀವನದಲ್ಲಿ ಜಿಗುಪ್ಸೆ ಗೊಂಡು ಎ.17ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಶಂಕರಪುರದ ರೋನಾಲ್ಡ್ ಬರ್ಬೊಜಾ(59) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಎ.19ರಂದು ರಾತ್ರಿ ಮೃತಪಟ್ಟಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಂದೂರು: ಮೀನು ಮಾರಾಟದಲ್ಲಿ ವಿಪರೀತ ನಷ್ಟ ಉಂಟಾಗಿ ಕೆಲವು ಕಡೆ ಸಾಲ ಪಡೆದು ವಾಪಸ್ಸು ನೀಡಲಾಗದ ಚಿಂತೆಯಲ್ಲಿ ಮನನೊಂದ ಉಪ್ಪುಂದ ಗ್ರಾಮದ ಕರ್ಕಿಕಳಿಯ ಶಶಿಕಲಾ(49) ಎಂಬವರು ಎ.19ರಂದು ರಾತ್ರಿ ಇಲಿ ಪಾಷಣ ಸೇವಿಸಿ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News