ಚಿಕ್ಕಮಗಳೂರು: ಕೊರೋನ ಸೋಂಕಿಗೆ ಓರ್ವ ಬಲಿ

Update: 2021-04-22 07:40 GMT

ಚಿಕ್ಕಮಗಳೂರು: ಕೊರೋನ ಸೋಂಕಿಗೆ ಒಳಗಾದ ವ್ಯಕ್ತಿಯೊಬ್ಬರು ಆ್ಯಂಬುಲೆನ್ಸ್ ನಲ್ಲೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ಮೃತರು ಕೊಪ್ಪ ಪಟ್ಟಣದ ನಿವಾಸಿ ಎಂದು ಗುರುತಿಸಲಾಗಿದ್ದು, ಅವರು ಇತ್ತೀಚಿಗೆ ತೀರ್ಥಹಳ್ಳಿಗೆ ಹೋಗಿ ಬಂದಿದ್ದರು ಎಂದು ತಿಳಿದುಬಂದಿದೆ.

ಇತ್ತಿಚೆಗೆ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು . ಕೊರೋನ ಪರೀಕ್ಷೆಯಲ್ಲಿ ಈ ವ್ಯಕ್ತಿಗೆ ಸೋಂಕು ಇರುವುದು ಪತ್ತೆಯಾಗಿದೆ. ಗುರುವಾರ ಕೊರೋನದಿಂದ ಗಂಭೀರ ಸಮಸ್ಯೆ ಕಂಡು ಬಂದಿದ್ದು, ಸಿಬ್ಬಂದಿ ಅವರನ್ನು ಗುರುವಾರ ಜಿಲ್ಲಾಸ್ಪತ್ರೆಯ ಕೊರೋನ ನಿಗಾ ಘಟಕಕ್ಕೆ ಆ್ಯಂಬುಲೆನ್ಸ್ ನಲ್ಲಿ ಕರೆದೊಯ್ಯುತ್ತಿದ್ದ ವೇಳೆ ಸೋಂಕಿತ ವ್ಯಕ್ತಿ ಆ್ಯಂಬುಲೆನ್ಸ್ ನಲ್ಲೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News