ದ.ಕ.ಜಿಲ್ಲೆಯಲ್ಲಿ ಶನಿವಾರ, ರವಿವಾರ ಬಸ್ ಸಂಚಾರ ಸ್ಥಗಿತ

Update: 2021-04-22 11:20 GMT

ಮಂಗಳೂರು, ಎ.22: ರಾಜ್ಯ ಸರಕಾರವು ಕೋವಿಡ್ ವೀಕೆಂಡ್ ಕರ್ಫ್ಯೂ ಘೋಷಿಸಿದ ಹಿನ್ನೆಲೆಯಲ್ಲಿ ಎ.24 ಮತ್ತು ಎ.25ರಂದು ದ.ಕ.ಜಿಲ್ಲಾದ್ಯಂತ ಖಾಸಗಿ ಸಿಟಿ ಮತ್ತು ಸರ್ವಿಸ್ ಬಸ್‌ಗಳು ಸಂಚಾರ ಸ್ಥಗಿತಗೊಳಿಸಲಿದೆ ಎಂದು ಬಸ್ ಮಾಲಕರ ಸಂಘಟನೆಯ ಮುಖಂಡರು ತಿಳಿಸಿದ್ದಾರೆ.

ಎ.23ರ ರಾತ್ರಿ 9ರಿಂದ ಎ.26ರ ಮುಂಜಾನೆ 6 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಹೇರಲಾಗಿದೆ. ಈ ಅವಧಿಯಲ್ಲಿ ತುರ್ತು ಸೇವೆಯ ಹೊರತು ಇತರ ಯಾವುದೇ ಕಾರ್ಯಾಚರಣೆಗೆ ಅವಕಾಶವಿರುವುದಿಲ್ಲ. ಹಾಗಾಗಿ ಎ.24ರ ಶನಿವಾರ ಮತ್ತು ಎ.25ರ ರವಿವಾರ ಬಸ್ ಬಂದ್ ಆಗಲಿದೆ.

ಈ ಬಗ್ಗೆ ‘ವಾರ್ತಾಭಾರತಿ’ಗೆ ಮಾಹಿತಿ ನೀಡಿದ ದ.ಕ.ಜಿಲ್ಲಾ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ ‘ಎ.24, 25ರಂದು ಕೋವಿಡ್ ವೀಕೆಂಡ್ ಕರ್ಫ್ಯೂ ಹೇರಿದ ಪರಿಣಾಮ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ’ ಎಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News