ಕೆಮ್ತೂರು ನಾಗರಾಜ ಭಟ್
Update: 2021-04-22 12:59 GMT
ಉಡುಪಿ, ಎ.22: ಉಡುಪಿ ಜಿಲ್ಲಾ ಜಾತ್ಯತೀತ ಜನತಾ ದಳದ ಹಿರಿಯ ನಾಯಕ, ಸಾಮಾಜಿಕ ಕಾರ್ಯಕರ್ತ ಕೆಮ್ತೂರು ನಾಗರಾಜ ಭಟ್ ಅವರು ಇಂದು ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 60 ವರ್ಷ ಪ್ರಾಯವಾಗಿತ್ತು.
ಅವಿವಾಹಿತರಾದ ನಾಗರಾಜ ಭಟ್, ಸಾಮಾಜಿಕ ಹಾಗೂ ಧಾರ್ಮಿಕ ಮುಂದಾಳುವಾಗಿದ್ದರು. ಪಕ್ಷದ ಸಂಘಟನೆಯಲ್ಲಿ ಅವರು ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ನಾಗರಾಜ ಭಟ್ ಅವರ ನಿಧನಕ್ಕೆ ಜಾತ್ಯತೀತ ಜನತಾ ದಳದ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಹಾಗೂ ಇತರ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.