ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು: ಇಬ್ಬರ ಮೃತದೇಹ ಪತ್ತೆ

Update: 2021-04-22 14:43 GMT

ಮೈಸೂರು,ಎ.22: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ನೀರು ಪಾಲಾಗಿರುವ ಘಟನೆ ತಿ.ನರಸೀಪುರ ತಾಲೂಕಿನ ತಲಕಾಡು ಬಳಿಯ ಹೆಮ್ಮಿಗೆ ಗ್ರಾಮದಲ್ಲಿ ಗುರುವಾರ ನಡೆದಿದೆ.

ರಾಜು ಎಂಬವರ ಪುತ್ರ ಯಶವಂತ ಕುಮಾರ್ (15), ಮಹದೇವಪ್ರಸಾದ್ (14), ಮಲ್ಲಿಕಾರ್ಜುನ ಎಂಬವರ ಪುತ್ರ ಆಕಾಶ್ (15), ನಿಂಗರಾಜು ಎಂಬವರ ಪುತ್ರ ಕಿಶೋರ್ (13) ಈಜಲು ಹೋಗಿ ನೀರುಪಾಲಾದವರು.

ನಾಲ್ವರು ಮಕ್ಕಳ ಪೈಕಿ ಇಬ್ಬರ ಶವ ಪತ್ತೆಯಾಗಿದ್ದು, ಪೊಲೀಸರು, ಮುಳುಗು ತಜ್ಞರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇನ್ನಿಬ್ಬರು ಸಂಜೆಯಾದರೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News