ವಲಸೆ ಕಾರ್ಮಿಕರು ದ.ಕ. ಜಿಲ್ಲೆ ಬಿಟ್ಟು ತೆರಳದಂತೆ ಡಿಸಿ ಸೂಚನೆ

Update: 2021-04-22 15:01 GMT

ಮಂಗಳೂರು, ಎ.22: ದ.ಕ.ಜಿಲ್ಲೆಯಲ್ಲಿ ಕೆಲಸ ಮಾಡುತ್ತಿರುವ ವಲಸೆ ಕಾರ್ಮಿಕರಿಗೆ ಯಾವುದೇ ತೊಂದರೆ ಆಗದಂತೆ ದೈನಂದಿನ ಆವಶ್ಯಕತೆಗಳನ್ನು ಪೂರೈಸಲು ಜಿಲ್ಲಾಡಳಿತದಿಂದ ಸಂಬಂಧಿತ ಕಟ್ಟಡ ನಿರ್ಮಾಣದಾರರು/ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ಗಳನ್ನು ನೀಡಲಾಗಿದೆ. ಹಾಗಾಗಿ ಯಾವುದೇ ಕಾರಣಕ್ಕೂ ವಲಸೆ ಕಾರ್ಮಿಕರು ಜಿಲ್ಲೆ ಬಿಟ್ಟು ತೆರಳಬಾರದು. ವಲಸೆ ಕಾರ್ಮಿಕರು ಜಿಲ್ಲೆಯಲ್ಲೇ ಕೆಲಸ ಮಾಡಬೇಕು ಎಂದು ದ.ಕ.ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಲಸೆ ಕಾರ್ಮಿಕರ ಸಮಸ್ಯೆಗೆ ಸಂಬಂಧಿಸಿ ಗುರುವಾರ ಕ್ರೆಡಾಯಿ, ಕೆನರಾ ಕೈಗಾರಿಕಾ ಸಂಘ, ಕೆಸಿಸಿಐ ಹಾಗೂ ಇತರ ಗುತ್ತಿಗೆ ದಾರರ ಸಂಘದ ಮುಖಂಡರ ಜೊತೆ ಚರ್ಚೆ ನಡೆಸಲಾಗಿದೆ. ಕಟ್ಟಡ ನಿರ್ಮಾಣ/ಉದ್ಯಮದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಯಾವುದೇ ತೊಂದರೆಯಾಗದಂತೆ ಗಮನಹರಿಸಬೇಕು ಎಂದು ಸೂಚಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News