ವಿಶ್ವೇಶ್ವರಯ್ಯ ನಾಲೆಯಲ್ಲಿ ಈಜುತ್ತಿದ್ದ ಇಬ್ಬರು ನೀರುಪಾಲು

Update: 2021-04-22 17:03 GMT

ಮಂಡ್ಯ, ಎ.22: ಕೆ.ಆರ್.ಎಸ್. ಬಳಿ ವಿಶ್ವೇಶ್ವರಯ್ಯ ನಾಲೆಯಲ್ಲಿ ಈಜುತ್ತಿದ್ದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಗುರುವಾರ ನಡೆದಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮಲ್ಲಿನಾಥಪುರ ಗ್ರಾಮದ ಸಣ್ಣೇಗೌಡ(34) ಹಾಗೂ ಬಸವೇಗೌಡ ನೀರು ಪಾಲಾದವರು.

ಇವರು ಕೆ.ಆರ್.ಎಸ್. ಪಕ್ಕದ ನಾರ್ತ್ ಬ್ಯಾಂಕ್ ಗ್ರಾಮದ ಕಾಳಮ್ಮ ದೇವಾಲಯಕ್ಕೆ ಪೂಜೆ ಸಲ್ಲಿಸಲು ಬಂದಿದ್ದಾಗ ಈ ಘಟನೆ ಸಂಭವಿಸಿದೆ.

ಬಸವೇಗೌಡ ಅವರ ಮೃತದೇಹ ಪತ್ತೆಯಾಗಿದ್ದು, ಸಣ್ಣೇಗೌಡರ ಅವರಿಗಾಗಿ ಶೋಧ ಮುಂದುವರಿದಿದೆ.

ಕೆ.ಆರ್.ಎಸ್. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News