ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಿಗರಿಗೆ ನಿಷೇಧ ಹೇರಿ ಜಿಲ್ಲಾಧಿಕಾರಿ ಆದೇಶ
Update: 2021-04-22 17:05 GMT
ಚಿಕ್ಕಮಗಳೂರು, ಎ.22: ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯ ರಾತ್ರಿ ಕರ್ಫ್ಯೂ ಮತ್ತು ವಾರಂತ್ಯದ ಕರ್ಫ್ಯೂ ಜಾರಿಗೊಳಿಸಿದ್ದು, ಈ ಸಂದರ್ಭದಲ್ಲಿ ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಪ್ರವಾಸಿಗರು ಆಗಮಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದ್ದಾರೆ.
ಗುರುವಾರ ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು, ಸೋಂಕು ತಡೆಗಟ್ಟುವ ಉದ್ದೇಶದಿಂದ ಜಿಲ್ಲೆ ಪ್ರವಾಸಿತಾಣಗಳಿಗೆ ರಾತ್ರಿ ಕರ್ಫ್ಯೂ ಮತ್ತು ವಾರಂತ್ಯ ಕರ್ಫ್ಯೂ ಸಂದರ್ಭದಲ್ಲಿ ಪ್ರವಾಸಿಗರ ಬೇಟಿ ನಿಷೇಧಿಸಲಾಗಿದೆ. ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸ ನಿಯೋಜನೆಗೊಂಡಿದ್ದಲ್ಲಿ ಪ್ರವಾಸವನ್ನು ಮೊಟಕುಗೊಳಿಸುವಂತೆ ಮನವಿ ಮಾಡಿದ್ದಾರೆ.