ಕರ್ನಾಟಕದಲ್ಲೂ ಉಚಿತ ಲಸಿಕೆ ನೀಡಿ: ದಿನೇಶ್ ಗುಂಡೂರಾವ್

Update: 2021-04-25 12:11 GMT

ಬೆಂಗಳೂರು, ಎ.25: ಕೋವಿಡ್-19 ಸಂಬಂಧ ರಾಜ್ಯ ಸರಕಾರ ಎಲ್ಲರಿಗೂ ಉಚಿತ ಲಸಿಕೆ ನೀಡಲು ಮುಂದಾಗಬೇಕು ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.

ರವಿವಾರ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿದ ಅವರು, ಸಾರ್ವಜನಿಕರ ಆರೋಗ್ಯವನ್ನು ಸರಕಾರ ವಾಣಿಜ್ಯಾತ್ಮಕ ದೃಷ್ಟಿಯಿಂದ ನೋಡಬಾರದು. ಕೋವಿಡ್ ಲಸಿಕೆ ಉಚಿತವಾಗಿ ಎಲ್ಲರಿಗೂ ಸಿಗುವಂತೆ ನೋಡಿಕೊಳ್ಳುವುದು ಸರಕಾರದ ಆದ್ಯ ಕರ್ತವ್ಯ ಎಂದರು.

ಕೇರಳ, ಅಸ್ಸಾಂ ಸೇರಿ ಹಲವು ರಾಜ್ಯಗಳು ಉಚಿತವಾಗಿ ಲಸಿಕೆ ನೀಡಲು ನಿರ್ಧರಿಸಿವೆ. ಹಾಗಾಗಿ, ರಾಜ್ಯ ಸರಕಾರವೂ ಉಚಿತ ಕೋವಿಡ್ ಲಸಿಕೆ ನೀಡಿ ಜನರ ಆರೋಗ್ಯ ಕಾಪಾಡಲಿ ಎಂದು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News