ಸಿದ್ದೀಕ್ ಕಪ್ಪನ್‌ಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ: ಆದಿತ್ಯನಾಥ್ ಗೆ ವಿನಂತಿಸಿದ ಕೇರಳ ಸಿಎಂ

Update: 2021-04-25 16:23 GMT

ಹೊಸದಿಲ್ಲಿ: ತೀವ್ರ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳಾಂತರಿಸುವಲ್ಲಿ ನಿಟ್ಟಿನಲ್ಲಿ ಮಧ್ಯಪ್ರವೇಶಿಸಬೇಕೆಂದು ಕೋರಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.

ಕಪ್ಪನ್ ಅವರ ವಕೀಲರು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್.ವಿ.ರಮಣ ಅವರಿಗೆ ಪತ್ರ ಬರೆದಿದ್ದಾರೆ.  ಕೋವಿಡ್ ಸೋಂಕಿನಿಂದ ಬಳಲುತ್ತಿರುವ ಕಪ್ಪನ್ ಅವರ ಜೀವ ಅಪಾಯದಲ್ಲಿದೆ. ಅವರನ್ನು ಮಥುರಾ ಆಸ್ಪತ್ರೆಯಿಂದ ಬಿಡುಗಡೆ ಮಾಡಲು ತಕ್ಷಣದ ಹಸ್ತಕ್ಷೇಪ ಕೋರಿ ಪತ್ರ ಬರೆದಿದ್ದಾರೆ.

ಕೇರಳದ 11 ಸಂಸತ್ ಸದಸ್ಯರು ಸಿಜೆಐ ರಮಣ ಅವರಿಗೆ ಈ ವಿಷಯದಲ್ಲಿ ತುರ್ತು ವಿಚಾರಣೆ ನಡೆಸಿ ಕಪ್ಪನ್ ಅವರನ್ನು  ಮಥುರಾ ವೈದ್ಯಕೀಯ ಕಾಲೇಜಿನಿಂದ ಏಮ್ಸ್ ಗೆ ಸ್ಥಳಾಂತರಿಸಲು ಅಗತ್ಯ ಆದೇಶಗಳನ್ನು ನೀಡುವಂತೆ ಪತ್ರ ಬರೆದಿದ್ದಾರೆ ಎಂದು 'ಲೈವ್ ಲಾ' ವರದಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News