​ಎಸ್‌ಸಿಡಿಸಿಸಿ ಬ್ಯಾಂಕ್‌ನ ಮಾಜಿ ವ್ಯವಸ್ಥಾಪನಾ ನಿರ್ದೇಶಕ ಮಾಧವ ನಿಧನ

Update: 2021-04-27 18:25 GMT

ಮಂಗಳೂರು, ಎ.27: ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್)ನ ಮಾಜಿ ವ್ಯವಸ್ಥಾಪನಾ ನಿರ್ದೇಶಕ ಹಾಗೂ ಸಹಕಾರ ಇಲಾಖೆಯ ನಿವೃತ್ತ ಜಂಟಿ ನಿಬಂಧಕ ನಗರದ ಮಂಗಳಾದೇವಿ ನಿವಾಸಿ ಮಾಧವ ಬಿ. (91) ಮಂಗಳವಾರ ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮೃತರು ಪತ್ನಿ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್‌ನ ಸಿಇಒ ರವೀಂದ್ರ ಬಿ. ಸಹಿತ ಇಬ್ಬರು ಪುತ್ರರು, ಮೂವರು ಪುತ್ರಿಯರು ಮತ್ತು ಅಪಾರ ಬಂಧುಮಿತ್ರರನ್ನು ಆಗಲಿದ್ದಾರೆ.

ಸಹಕಾರ ಇಲಾಖೆಯಲ್ಲಿ ಸುಮಾರು 36 ವರ್ಷಗಳ ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿರುವ ಅವರು ನಿವೃತ್ತರಾಗುವಾಗ ಸಹಕಾರ ಸಂಘಗಳ ಜಂಟಿ ನಿಬಂಧಕರಾಗಿದ್ದರು. ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ 1982ರಿಂದ 1988ರವರೆಗೆ ವ್ಯವಸ್ಥಾಪನಾ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಬ್ಯಾಂಕ್‌ನ ಆಡಳಿತ ಮಂಡಳಿಯ ಮಾಜಿ ನಿರ್ದೇಶಕರಾಗಿ, ಮಂಗಳೂರು ಬಿಲ್ಡಿಂಗ್ ಸೊಸೈಟಿ ಸಹಿತ ಹಲವು ಸಹಕಾರ ಸಂಘಗಳಲ್ಲಿ ನಿರ್ದೇಶಕರಾಗಿದ್ದರು.

*ಡಾ.ಎಂಎನ್‌ಆರ್ ಸಂತಾಪ: ಎಸ್‌ಸಿಡಿಸಿಸಿ ಬ್ಯಾಂಕಿನ ಮಾಜಿ ವ್ಯವಸ್ಥಾಪನಾ ನಿರ್ದೇಶಕ ಮಾಧವ ಬಿ. ಅವರ ನಿಧನಕ್ಕೆ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂಎನ್ ರಾಜೇಂದ್ರ ಕುಮಾರ್ ಸಂತಾಪ ಸೂಚಿಸಿದ್ದಾರೆ. ಆರು ವರ್ಷಗಳ ಕಾಲ ಬ್ಯಾಂಕ್‌ನ ವ್ಯವಸ್ಥಾಪನಾ ನಿರ್ದೇಶಕರಾಗಿ ಅವರು ದಕ್ಷತೆಯಿಂದ ಕಾರ್ಯ ನಿರ್ವಹಿಸಿದ್ದರು ಎಂದು ಸಂತಾಪದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News