ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ
Update: 2021-04-28 13:30 GMT
ಬೆಂಗಳೂರು, ಎ.28: ಕೋವಿಡ್ ಸೋಂಕು ಉಲ್ಬಣ ಕಾರಣದಿಂದ ರಾಜ್ಯ ಸರಕಾರ ಕರ್ಫ್ಯೂ ಘೋಷಿಸಿರುವ ಹಿನ್ನೆಲೆಯಲ್ಲಿ ಎ.28ರಿಂದ ಮೇ 11ರವರೆಗೆ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಸಾರ್ವಜನಿಕರ ಪ್ರವೇಶ ರದ್ದುಗೊಳಿಸಲಾಗಿದೆ.
ರಾಜ್ಯ ಸರಕಾರ ಕೊರೋನ ಸೋಂಕು ತಡೆಗಟ್ಟಲು ಕೈಗೊಂಡಿರುವ ಮಾರ್ಗಸೂಚಿಯಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನದ ಕಾರ್ಯ ನಿರ್ವಾಹಕ ನಿರ್ದೇಶಕಿ ವನಶ್ರೀ ವಿಪಿನ್ ಸಿಂಗ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.