'ಕೋವಿಡ್ ಕರ್ಫ್ಯೂ' ಪಾಸ್ ವಿತರಣೆ ಇಲ್ಲ: ಪೊಲೀಸ್ ಆಯುಕ್ತ ಕಮಲ್ ಪಂತ್ ಸ್ಪಷ್ಟನೆ

Update: 2021-04-28 13:32 GMT

ಬೆಂಗಳೂರು, ಎ.28: ಕರ್ಫ್ಯೂ ಹಿನ್ನೆಲೆಯಲ್ಲಿ ನಗರ ಪೊಲೀಸ್ ವತಿಯಿಂದ ಸಂಚಾರ ಕುರಿತು ಯಾವುದೇ ರೀತಿಯ ಪಾಸ್‍ಗಳನ್ನು ವಿತರಿಸುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಸರಕಾರದ ಆದೇಶದಲ್ಲಿ ವಿನಾಯಿತಿ ನೀಡಿರುವ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ತಮ್ಮ ಸ್ಥಳಗಳಿಗೆ ಗುರುತಿನ ಚೀಟಿ ಅಥವಾ ಸಮರ್ಥನೀಯ ದಾಖಲಾತಿಗಳನ್ನು ಹಾಜರುಪಡಿಸಿ ಪ್ರಯಾಣಿಸಬಹುದು ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News