ಉಳ್ಳಾಲ: ಸ್ನೇಹಿತರೊಂದಿಗೆ ವಿಹಾರಕ್ಕೆ ತೆರಳಿದ್ದ ಯುವಕ ನಾಪತ್ತೆ

Update: 2021-04-28 14:13 GMT

ಉಳ್ಳಾಲ: ಸ್ನೇಹಿತರೊಂದಿಗೆ ನೇತ್ರಾವತಿ ರೈಲ್ವೇ ಸೇತುವೆ ಬಳಿ ವಿಹಾರಕ್ಕೆ ತೆರಳಿದ್ದ ಯುವಕ ದಿಢೀರ್ ನಾಪತ್ತೆಯಾದ ಘಟನೆ ಸೋಮವಾರ ಸಂಜೆ ನಡೆದಿದ್ದು, ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. 

ಉಳ್ಳಾಲಬೈಲ್ ನಿವಾಸಿ ನಿತಿನ್(32) ನಾಪತ್ತೆಯಾದ ಯುವಕ. ನಿತಿನ್ ಸೋಮವಾರ ಮಧ್ಯಾಹ್ನ ಇಬ್ಬರು ಸ್ನೇಹಿತರ ಜೊತೆಗೆ ಸಂಜೆ ಹೊತ್ತಿಗೆ ನೇತ್ರಾವತಿ ರೈಲ್ವೇ ಸೇತುವೆ ಬಳಿ ತೆರಳಿದ್ದರು ಎನ್ನಲಾಗಿದ್ದು, ನಂತರ ನಿತಿನ್ ನಾಪತ್ತೆಯಾಗಿದ್ದಾರೆ . ಈ ಬಗ್ಗೆ ನಿತಿನ್ ಸಹೋದರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದು, ಪೊಲೀಸರು ನಿತಿನ್ ಜೊತೆಗಿದ್ದ ಇಬ್ಬರು ಸ್ನೇಹಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News