ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ಕಾರ್ಯ ನಿರ್ವಹಣಾ ಅವಧಿಯಲ್ಲಿ ಬದಲಾವಣೆ

Update: 2021-04-28 17:46 GMT

ಮಂಗಳೂರು: ರಾಜ್ಯದಲ್ಲಿ ಕೋವಿಡ್ ಮಹಾ ಮಾರಿಯ ಎರಡನೇ ಅಲೆಯು ವ್ಯಾಪಕವಾಗಿರುವ ಹಿನ್ನಲೆಯಲ್ಲಿ ರಾಜ್ಯ ಸರಕಾರವು 15 ದಿನಗಳ ಕಾಲ ಕೋವಿಡ್ ಕರ್ಫ್ಯೂ ಘೋಷಿಸಿರುವುದರಿಂದ ಈ ದಿನಗಳಲ್ಲಿ ಸಂಘದ ಗ್ರಾಹಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ಎಲ್ಲಾ ಶಾಖೆಗಳು ಬೆಳಿಗ್ಗೆ 8.00 ರಿಂದ ಮಧ್ಯಾಹ್ನ 12 ಗಂಟೆವರೆಗೆ ಕಾರ್ಯನಿರ್ವಹಿಸಲಿದ್ದು, ಸದಸ್ಯರು ಹಾಗೂ ಗ್ರಾಹಕರು ಸಂಘದಲ್ಲಿ ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣ ಸಾಲ, ವಾಹನ ಸಾಲ, ಆಸ್ತಿ ಅಡಮಾನ ಸಾಲ, ನೆಫ್ಟ್, ಆರ್‍ಟಿಜಿಎಸ್, ಉಳಿತಾಯ ಖಾತೆ ಮುಂತಾದ ಸೇವೆಗಳನ್ನು ಪಡೆದುಕೊಳ್ಳಬಹುದು ಎಂದು ಸಂಘದ ಅಧ್ಯಕ್ಷರಾದ ಜೆ ಕೃಷ್ಣ ಪಾಲೇಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News