ಹಸೈನಾರ್ ಅಕ್ಕರೆ

Update: 2021-04-29 05:22 GMT

ಪುತ್ತೂರು, ಎ.29: ಮಿತ್ತೂರು ಅಕ್ಕರೆ ನಿವಾಸಿ, ಪ್ರಗತಿಪರ ಕೃಷಿಕ ಹಸೈನಾರ್ (70) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

 ಮಿತ್ತೂರು ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾಗಿ, ಇಡ್ಕಿದು ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಇವರು ಮಿತ್ತೂರು ಸಿರಾಜುಲ್ ಹುದಾ ಜುಮಾ ಮಸೀದಿಯಲ್ಲಿ ಹಲವು ವರ್ಷಗಳ ಕಾಲ ಕೋಶಾಧಿಕಾರಿಯಾಗಿದ್ದರು.

 ಮೃತರು ಓರ್ವ  ಪುತ್ರ, ಐವರು ಪುತ್ರಿಯರು ಹಾಗೂ ಅಪಾರ ಬಂಧುಮಿತ್ರರನ್ನು ಆಗಲಿದ್ದಾರೆ. 

ಮೃತರ ಧಫನ ಕಾರ್ಯ ಮಿತ್ತೂರು ಸಿರಾಜುಲ್ ಹುದಾ ಮಸೀದಿ ವಠಾರದಲ್ಲಿ ಬುಧವಾರ ನೆರವೇರಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ