ಎಸ್ಸೆಸ್ಸೆಫ್ ದ.ಕ ಜಿಲ್ಲೆ ವತಿಯಿಂದ ರಮಝಾನ್ ಕಿಟ್ ವಿತರಣೆ

Update: 2021-04-30 06:41 GMT

ಮಂಗಳೂರು : ದ.ಕ. ವೆಸ್ಟ್ ಜಿಲ್ಲಾಧ್ಯಕ್ಷ ಮುನೀರ್ ಅಹ್ಮದ್ ಸಖಾಫಿ ಉಳ್ಳಾಲ ಅವರ ನೇತೃತ್ವದಲ್ಲಿ ಆಯ್ದ 150 ಅರ್ಹ ಕುಟುಂಬಗಳಿಗೆ ರಮಝಾನ್ ಕಿಟ್ ವಿತರಣೆ ಕಾರ್ಯಕ್ರಮ ಕ್ರಷ್ಣಾಪುರದ ಕಚೇರಿಯಲ್ಲಿ ಶುಕ್ರವಾರ ನಡೆಯಿತು.

ಎಸ್ಸೆಸ್ಸೆಫ್ ರಾಜ್ಯ ಸದಸ್ಯರಾದ ಸಯ್ಯಿದ್ ಖುಬೈಬ್ ತಂಙಳ್ ಉದ್ಘಾಟಿಸಿದರು. ಜಿಲ್ಲಾ ಕ್ಯೂಡಿ ಕಾರ್ಯದರ್ಶಿ ಇಬ್ರಾಹಿಂ ಅಹ್ಸನಿ ಮಂಜನಾಡಿ ಹಾಗೂ ದಹ್ವಾ ಕಾರ್ಯದರ್ಶಿ ಆರಿಫ್ ಝುಹ್ರಿ ಮುಕ್ಕ ಆಶಂಸ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಫಿನಾನ್ಸ್ ಸೆಕ್ರೆಟರಿ ಇಕ್ಬಾಲ್ ಮದ್ಯನಡ್ಕ ,ಜಿಲ್ಲಾ ಸದಸ್ಯರಾದ ರಫೀಖ್ ಸುರತ್ಕಲ್ ಹಾಗೂ ಹಮೀದ್ ವರಕೋಡಿ ಉಪಸ್ಥಿತರಿದ್ದರು.

ಜಿಲ್ಲಾ ಪ್ರ.ಕಾರ್ಯದರ್ಶಿ ಹೈದರಾಲಿ 4ನೇ ಬ್ಲಾಕ್ ಕಾಟಿಪಳ್ಳ ಸ್ವಾಗತಿಸಿ, ಜಿಲ್ಲಾ ರೈನ್ಬೋ ಕಾರ್ಯದರ್ಶಿ ಮನ್ಸೂರ್ ಬಜಾಲ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News