ಆಕ್ಸಿಜನ್ ಸಿಲಿಂಡರ್ ಸ್ಫೋಟ: ಓರ್ವ ಕಾರ್ಮಿಕ ಬಲಿ, ಇಬ್ಬರಿಗೆ ಗಾಯ

Update: 2021-04-30 08:18 GMT

ಕಾನ್ಪುರ: ಕಾನ್ಪುರದ ಪಾಂಕಿ ಆಕ್ಸಿಜನ್ ಸ್ಥಾವರದಲ್ಲಿ ಶುಕ್ರವಾರ ಬೆಳಗ್ಗೆ ಆಕ್ಸಿಜನ್ ಮರುಪೂರಣ ಮಾಡುವಾಗ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮವಾಗಿ ಓರ್ವ ಕಾರ್ಮಿಕ ಮೃತಪಟ್ಟರೆ, ಇನ್ನಿಬ್ಬರು ಗಾಯಗೊಂಡಿದ್ದಾರೆ.

ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಪೊಲೀಸರು ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಿದ್ದು, ಮೃತಪಟ್ಟ ಕಾರ್ಮಿಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಆಕ್ಸಿಜನ್ ಸಿಲಿಂಡರ್ ಮರುಪೂರಣ ಮಾಡುವಾಗ ಬೆಳಗ್ಗಿನ ಜಾವ 4 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅತುಲ್ ಕುಮಾರ್ ತಿಳಿಸಿದ್ದಾರೆ.

ಮೃತ ಕಾರ್ಮಿಕನನ್ನು ಮುರಾದ್ ಅಲಿ ಎಂದು ಗುರುತಿಸಲಾಗಿದೆ. ಈತ ಮರ್ದಾನ್ಪುರ ನಿವಾಸಿಯಾಗಿದ್ದು, ಆಕ್ಸಿಜನ್ ಸ್ಥಾವರದಲ್ಲಿ ಕೆಲಸ ಮಾಡುತ್ತಿದ್ದ.

ಗಾಯಗೊಂಡವರನ್ನು ಹರಿ ರಾಂ ಗೌತಮ್ ಹಾಗೂ ಅಜಯ್ ಎಂದು ಗುರುತಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News