ಬೆಳಗಾವಿ ಲೋಕಸಭಾ ಕ್ಷೇತ್ರ: ರೋಚಕ ಹಣಾಹಣಿಯಲ್ಲಿ ಗೆಲುವಿನ ನಗೆ ಬೀರಿದ ಬಿಜೆಪಿಯ ಮಂಗಳಾ ಅಂಗಡಿ

Update: 2021-05-02 12:39 GMT

ಬೆಳಗಾವಿ, ಮೇ 2: ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿಯವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ರೋಚಕವಾಗಿ ಜಯಬೇರಿ ಬಾರಿಸಿದ್ದಾರೆ.

ಸುರೇಶ್ ಅಂಗಡಿಯವರ ಪತ್ನಿಯಾಗಿರುವ ಮಂಗಳಾ ಗೆಲುವಿನ ನಗೆ ಬೀರಿದ್ದರಿಂದ ಈ ಕ್ಷೇತ್ರವನ್ನು ಬಿಜೆಪಿ ತನ್ನಲ್ಲೆ ಉಳಿಸಿಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಸೋಲುಂಡಿದ್ದಾರೆ.

ಮತ ಎಣಿಕೆಯ ಆರಂಭದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಸತೀಶ್ ಜಾರಕಿಹೊಳಿ ಸುಮಾರು 12 ಸುತ್ತುಗಳ ಅಂತ್ಯದವರೆಗೂ ಈ ಮುನ್ನಡೆಯನ್ನು ಕಾಯ್ದುಕೊಂಡಿದ್ದರು. ಆದರೆ ಬಳಿಕ ಮುನ್ನಡೆ ಸಾಧಿಸಿದ ಮಂಗಳಾ ಅವರು ಮುಂದಿನ ಪ್ರತೀ ಸುತ್ತಿನಲ್ಲೂ ಈ ಮುನ್ನಡೆಯನ್ನು ಹೆಚ್ಚಿಸಿಕೊಳ್ಳುತ್ತಾ ಸಾಗಿದರು. ಬಳಿಕ ಮತ್ತೊಮ್ಮೆ ಸತೀಶ್ ಜಾರಕಿಹೊಳಿ ಮುನ್ನಡೆ ಸಾಧಿಸಿ ಇನ್ನೇನು ಗೆದ್ದೇಬಿಟ್ಟರು ಅನ್ನುವ ಮಟ್ಟಕ್ಕೆ ತಲುಪಿದ್ದರು. ಆದರೆ ಕೊನೇಯ ಹಂತದಲ್ಲಿ ಮುನ್ನಡೆ ಸಾಧಿಸಿದ ಮಂಗಳಾ ರೊಚಕವಾಗಿ ಗೆಲುವು ಸಾಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News