ಮೊಬೈಲ್‍ ಸಂದೇಶ ನಂಬಿ 7 ಲಕ್ಷ ರೂ. ಕಳೆದುಕೊಂಡ ಉದ್ಯಮಿ

Update: 2021-05-02 17:53 GMT

ಬೆಂಗಳೂರು, ಮೇ 2: ಮೊಬೈಲ್‍ನಲ್ಲಿ ಸಂದೇಶ ಕಳುಹಿಸಿ ನಗರದ ಮಾರತ್ತಹಳ್ಳಿಯ ಉದ್ಯಮಿಯೊಬ್ಬರಿಗೆ 7 ಲಕ್ಷ ರೂ. ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಕೆಲ ದಿನಗಳ ಹಿಂದೆ ಅಮೆರಿಕಾದಲ್ಲಿನ ಉದ್ಯಮಿ ಸ್ನೇಹಿತ ಸಂಜಯ್ ಸಿಂಗ್ ಹೆಸರಲ್ಲಿ ಮೊಬೈಲ್‍ಗೆ ಸಂದೇಶ ಬಂದಿತ್ತು. ಅದರಲ್ಲಿ ನಾನು ಅನಾರೋಗ್ಯ ಸಮಸ್ಯೆಗೆ ಸಿಲುಕಿದ್ದು ಅದಷ್ಟು ಬೇಗ ಹಣ ಕಳುಹಿಸುವಂತೆ ಮನವಿ ಮಾಡಲಾಗಿತ್ತು.

ಈ ರೀತಿಯ ಸಂದೇಶ ನೋಡಿ ಆತಂಕಗೊಂಡ ಉದ್ಯಮಿ ಗೆಳೆಯ ಖಾತೆಗೆ 7 ಲಕ್ಷ ರೂ.ಗಳನ್ನು ಜಮಾ ಮಾಡಿದ್ದಾರೆ. ಬಳಿಕ ಪರಿಶೀಲನೆ ನಡೆಸಿದಾಗ ವಂಚನೆಗೆ ಒಳಗಾಗಿರುವುದು ಗೊತ್ತಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗಿದೆ ಎಂದು ಸಿಎನ್‍ಎನ್ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News