ರಾಜ್ಯಾದ್ಯಂತ 44 ಸಾವಿರ ಮಂದಿಗೆ ಕೊರೋನ ಸೋಂಕು ದೃಢ: 239 ಮಂದಿ ಸಾವು

Update: 2021-05-03 17:16 GMT

ಬೆಂಗಳೂರು, ಮೇ 3: ರಾಜ್ಯದಲ್ಲಿ ಸೋಮವಾರದಂದು 44,438 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 239 ಜನರು ಸೋಂಕಿಗೆ ಬಲಿಯಾಗಿದ್ದು, 21,149 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 16,46,303ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 16,250ಕ್ಕೆ ತಲುಪಿದೆ.

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 4,44,734ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

239 ಸೋಂಕಿತರು ಬಲಿ: ಬಾಗಲಕೋಟೆ 5, ಬಳ್ಳಾರಿ 13, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 115, ಬೀದರ್ 3, ಚಾಮರಾಜನಗರ 19, ಚಿಕ್ಕಬಳ್ಳಾಪುರ 5, ಚಿತ್ರದುರ್ಗ 4, ದಾವಣಗೆರೆ 3, ಧಾರವಾಡ 4, ಹಾಸನ 13, ಹಾವೇರಿ 2, ಕಲಬುರಗಿ  5, ಕೋಲಾರ 3, ಮೈಸೂರು 14, ರಾಯಚೂರು 2, ರಾಮನಗರ 3, ಶಿವಮೊಗ್ಗ 7, ತುಮಕೂರು 8, ಉಡುಪಿ 1, ಉತ್ತರ ಕನ್ನಡ 1, ವಿಜಯಪುರ 4, ಯಾದಗಿರಿ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 44,438 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 569, ಬಳ್ಳಾರಿ 990, ಬೆಳಗಾವಿ 559, ಬೆಂಗಳೂರು ಗ್ರಾಮಾಂತರ 815,  ಬೆಂಗಳೂರು ನಗರ 22,112, ಬೀದರ್ 396, ಚಾಮರಾಜನಗರ 724, ಚಿಕ್ಕಬಳ್ಳಾಪುರ 886, ಚಿಕ್ಕಮಗಳೂರು 206, ಚಿತ್ರದುರ್ಗ 151, ದಕ್ಷಿಣ ಕನ್ನಡ 793, ದಾವಣಗೆರೆ 104, ಧಾರವಾಡ 1021, ಗದಗ 191, ಹಾಸನ 1,673, ಹಾವೇರಿ 330, ಕಲಬುರಗಿ 1083, ಕೊಡಗು 628, ಕೋಲಾರ 656, ಕೊಪ್ಪಳ 617, ಮಂಡ್ಯ 1367, ಮೈಸೂರು 2685, ರಾಯಚೂರು 529, ರಾಮನಗರ 492, ಶಿವಮೊಗ್ಗ 584, ತುಮಕೂರು 2361, ಉಡುಪಿ 529, ಉತ್ತರ ಕನ್ನಡ 776, ವಿಜಯಪುರ 274, ಯಾದಗಿರಿ ಜಿಲ್ಲೆಯಲ್ಲಿ 337 ಪ್ರಕರಣಗಳು ಪತ್ತೆಯಾಗಿವೆ.

ರಾಜಧಾನಿಯಲ್ಲಿ 115 ಜನರು ಸಾವು

ರಾಜಧಾನಿಯಲ್ಲಿ ಸೋಮವಾರದಂದು 22,112 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 115 ಜನರು ಮೃತಪಟ್ಟಿದ್ದಾರೆ. 8,847 ಸೋಂಕಿತರು ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 8,19,404  ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 6,716 ಜನರು ಸೋಂಕಿಗೆ ಬಲಿಯಾಗಿದ್ದಾರೆ. 5,17,770 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News