ಲಾರಿ ಢಿಕ್ಕಿ: ಮಹಿಳೆ ಮೃತ್ಯು

Update: 2021-05-04 16:12 GMT

ಕುಂದಾಪುರ, ಮೇ 4: ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮೇ 3ರಂದು ಸಂಜೆ 6:30ರ ಸುಮಾರಿಗೆ ತಲ್ಲೂರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ನೇತ್ರಾವತಿ ಎಂದು ಗುರುತಿಸಲಾಗಿದೆ. ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಲಾರಿ, ತಲ್ಲೂರಿನಿಂದ ಸುಪ್ರೀಂ ಟೈಲ್ಸ್ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ನೇತ್ರಾವತಿಗೆ ಹಿಂದಿನಿಂದ ಢಿಕ್ಕಿ ಹೊಡೆಯಿತ್ತೆ ನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು.

ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News