ಕುಳಾಯಿ; ಕೋವಿಡ್19 ನಿಯಮ ಉಲ್ಲಂಘನೆ ಆರೋಪ: ಮದುವೆ ಪಾರ್ಟಿಗೆ ಅಧಿಕಾರಿಗಳ ದಾಳಿ

Update: 2021-05-04 18:09 GMT

ಮಂಗಳೂರು, ಮೇ 4: ನಗರ ಹೊರವಲಯದ ಕುಳಾಯಿ ಶೋರ್ ಬೀಚ್ ರೆಸಾರ್ಟ್‌ನಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ ಎನ್ನಲಾದ ಆರೋಪದಲ್ಲಿ ಮದುವೆ ಪಾರ್ಟಿಗೆ ಮಂಗಳವಾರ ಅಧಿಕಾರಿಗಳು ದಾಳಿ ನಡೆಸಿ ಕೇಸು ದಾಖಲಿಸಿದ್ದಾರೆ.

ಶೋರ್ ರೆಸಾರ್ಟ್‌ನಲ್ಲಿ ಮಂಗಳವಾರ ಸಂಜೆ ಮದುವೆ ಪಾರ್ಟಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಜ್ಯ ಸರಕಾರದ ಮಾರ್ಗಸೂಚಿ ಉಲ್ಲಂಘಿಸಿ ಅಧಿಕ ಸಂಖ್ಯೆಯಲ್ಲಿ ಜನ ಸೇರಿಸಲಾಗಿತ್ತು. ಅಲ್ಲದೆ ಡಿಜೆ, ಮದ್ಯಪಾನದ ವ್ಯವಸ್ಥೆ ಮಾಡಲಾಗಿತ್ತು‌ ಎನ್ನಲಾಗಿದೆ.

ಈ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ, ಕಾರ್ಯಕ್ರಮ ಆಯೋಜಕರ ವಿರುದ್ಧ ಹಾಗೂ ರೆಸಾರ್ಟ್ ಮಾಲಕರ ವಿರುದ್ಧ ಕೇಸು ದಾಖಲಿಸಲು ಸುರತ್ಕಲ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಅದರಂತೆ ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News