ಉಡುಪಿ ಜಿಲ್ಲೆಗೆ ಅಗತ್ಯವಿರುವ ಆಕ್ಸಿಜನ್, ರೆಮ್‌ಡಿಸಿವರ್ ಸರಬರಾಜಿಗೆ ಕ್ರಮ: ಸಚಿವ ಬೊಮ್ಮಾಯಿ ಭರವಸೆ

Update: 2021-05-05 13:59 GMT

ಉಡುಪಿ, ಮೇ 5: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿ ರುವ ಆಕ್ಸಿಜನ್ ಮತ್ತು ರೆಮ್‌ಡಿಸಿವರ್ ಸರಬರಾಜು ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಬುಧವಾರ ಬೆಂಗಳೂರಿನಿಂದ ಉಡುಪಿ ಜಿಲ್ಲಾಡಳಿತದ ಜೊತೆಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸೆಯಲ್ಲಿ ಅವರು ಮಾತನಾಡುತಿದ್ದರು.

ಜಿಲ್ಲೆಗೆ ಪ್ರತೀದಿನ ಅಗತ್ಯವಿರುವ ರೆಮ್‌ಡಿಸಿವರ್ ಬಗ್ಗೆ ವರದಿಯನ್ನು ನೀಡಬೇಕು. ಹಾಗೂ ಆಕ್ಸಿಜನ್ ಕೊರತೆಯಾಗದಂತೆ, ನಿರಂತರವಾಗಿ ಸರಬ ರಾಜು ಮತ್ತು ದಾಸ್ತಾನು ಇರುವಂತೆ ಎಚ್ಚರವಹಿಸಬೇಕು. ಜಿಲ್ಲೆಗೆ ಆಗತ್ಯವಿರುವ ರೆಮ್‌ಡಿಸಿವರ್ ಮತ್ತು ಆಕ್ಸಿಜಿನ್ ಒದಗಿಸುವ ಕುರಿತಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಆದರೆ ಇದರ ಆಡಿಟ್ ನಡೆಸಿ, ಅಗತ್ಯ ಪ್ರಮಾಣದಲ್ಲಿ, ಅಗತ್ಯವಿರುವ ರೋಗಿಗಳಿಗೆ ಮಾತ್ರ ನೀಡಿ. ಅನಗತ್ಯ ಪೋಲಾಗದಂತೆ ಎಚ್ಚರ ವಹಿಸಿ ಎಂದು ಸಚಿವರು ಸೂಚನೆ ನೀಡಿದರು.

ಹೋಮ್ ಐಸೋಲೇಷನ್‌ನಲ್ಲಿರುವ ಕೋವಿಡ್ ಸೋಂಕಿತರು ಮನೆಯಲ್ಲಿ ಪ್ರತ್ಯೇಕವಾಗಿರಬೇಕು. ಇದನ್ನು ಖಾತ್ರಿ ಪಡಿಸಿಕೊಳ್ಳಬೇಕು. ಏಕೆಂದರೆ ಸೋಂಕಿತರ ಮನೆಯಿಂದಲೇ ಬಹಳಷ್ಟು ಮಂದಿಗೆ ಸೋಂಕು ಹರಡುತ್ತಿದೆ. ಹೀಗಾಗಿ ಮನೆಯಲ್ಲಿ ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆಯಲು ಸಾಧ್ಯ ವಾಗದ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ಸೇರಿಸಿ ಚಿಕಿತ್ಸೆ ನೀಡಿ. ಈ ಕೆಲಸಕ್ಕೆ ಪಿಡಿಓ ಹಾಗೂ ಇತರ ಅಧಿಕಾರಿಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದರು.

ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚುವರಿ ಐಸಿಯು ಬೆಡ್:  ಆರ್‌ಪಿಟಿಪಿಸಿಆರ್ ವರದಿ ನೆಗಟಿವ್ ಬಂದು ರೋಗ ಲಕ್ಷಣವಿರುವವರು ಮತ್ತು ಐಎಲ್‌ಐ ಹಾಗೂ ಸಾರಿ (ಎಸ್‌ಎಆರ್‌ಐ) ಪ್ರಕರಣ ಕಂಡುಬರುವವರಿಗೂ ಬೆಡ್‌ಗಳನ್ನು ಮೀಸಲಿಡಿ. ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 10 ಐಸಿಯು ಬೆಡ್‌ಗಳನ್ನು ಸಿದ್ಧಪಡಿಸುವಂತೆ ಸೂಚನೆ ನೀಡಿದ ಸಚಿವರು, ಜಿಲ್ಲೆಯ ಕೆಎಂಸಿ ಮತ್ತು ಡಾ.ಟಿಎಂಎ ಪೈ ಅಸ್ಪತ್ರೆಗಳಲ್ಲಿ ಕೋವಿಡ್‌ಗಾಗಿ ಮೀಸಲಿಟ್ಟಿರುವ ಐಸಿಯು ಬೆಡ್‌ಗಳ ಸಂಖ್ಯೆ ಯನು್ನ ಹೆಚ್ಚಳ ಮಾಡುವಂತೆ ತಿಳಿಸಿದರು.

ಆರ್‌ಪಿಟಿಪಿಸಿಆರ್ ವರದಿ ನೆಗಟಿವ್ ಬಂದು ರೋಗ ಲಕ್ಷಣವಿರುವವರು ಮತ್ತು ಐಎಲ್‌ಐ ಹಾಗೂ ಸಾರಿ (ಎಸ್‌ಎಆರ್‌ಐ) ಪ್ರಕರಣ ಕಂಡು ಬರುವವರಿಗೂ ಬೆಡ್‌ಗಳನ್ನು ಮೀಸಲಿಡಿ. ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 10 ಐಸಿಯು ಬೆಡ್‌ಗಳನ್ನು ಸಿದ್ದ ಪಡಿಸುವಂತೆ ಸೂಚನೆ ನೀಡಿದ ಸಚಿವರು, ಜಿಲ್ಲೆಯ ಕೆಎಂಸಿ ಮತ್ತು ಡಾ.ಟಿಎಂಎ ಪೈ ಅಸ್ಪತ್ರೆಗಳಲ್ಲಿ ಕೋವಿಡ್‌ಗಾಗಿ ಮೀಸಲಿಟ್ಟಿರುವ ಐಸಿಯು ಬೆಡ್‌ಗಳ ಸಂಖ್ಯೆ ಯನ್ನು ಹೆಚ್ಚಳ ಮಾಡುವಂತೆ ತಿಳಿಸಿದರು. ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಜಿಲ್ಲಾಡಳಿತಕ್ಕಾಗಿ ಮೀಸಲಿಟ್ಟಿರುವ ಬೆಡ್ ಗಳಲ್ಲಿ ಅಗತ್ಯವಿದ್ದಲ್ಲಿ ಸರಕಾರದಿಂದ ನೀಡುವ ವೆಂಟಿಲೇಟರ್‌ಗಳನ್ನು ಅಳವಡಿಸಿ ರೋಗಿಗಳಿಗೆ ಚಿಕಿತ್ಸೆ ನೀಡುವಂತೆ ಬೊಮ್ಮಾಯಿ ಸಲಹೆ ನೀಡಿದರು.

ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಜಿಲ್ಲಾಡಳಿತಕ್ಕಾಗಿ ಮೀಸಲಿಟ್ಟಿರುವ ಬೆಡ್ ಗಳಲ್ಲಿ ಅಗತ್ಯವಿದ್ದಲ್ಲಿ ಸರಕಾರದಿಂದ ನೀಡುವ ವೆಂಟಿಲೇಟರ್‌ಗಳನ್ನು ಅಳವಡಿಸಿ ರೋಗಿಗಳಿಗೆ ಚಿಕಿತ್ಸೆ ನೀಡುವಂತೆ ಬೊಮ್ಮಾಯಿ ಸಲಹೆ ನೀಡಿದರು. ಜಿಲ್ಲೆಯಲ್ಲಿಕೋವಿಡ್ ಲಸಿಕೆ ನೀಡುವಾಗ ಎರಡನೇ ಡೋಸ್ ನೀಡುವವರಿಗೆ ಆದ್ಯತೆಯನ್ನು ನೀಡಿ.ಎರಡನೇ ಡೋಸ್‌ನ ಅಗತ್ಯವಿರುವವರ ಕುರಿತು ವರದಿ ನೀಡಿ. ಅದನ್ನು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುವುದು. ಕಾಲಮಿತಿ ನಿಗದಿಪಡಿಸಿ ಎರಡನೇ ಡೋಸ್‌ನ್ನು ಎಲ್ಲರಿಗೂ ನೀಡಿ ಎಂದರು.

ಗ್ರಾಪಂ ಕಾರ್ಯಪಡೆ: ಜಿಲ್ಲೆಯ ಗ್ರಾಮಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ರಚಿಸಲಾಗಿರುವ ಕಾರ್ಯ ಪಡೆಗಳು ಸಮರ್ಪಕವಾಗಿ ಕೆಲಸ ನಿರ್ವಹಿ ಸುವ ಕುರಿತಂತೆ ಪ್ರತೀ ದಿನ ನಿಗಾ ವಹಿಸುವಂತೆ ಜಿಲ್ಲಾ ಪಂಚಾಯತ್ ಸಿಇಓಗೆ ಸೂಚಿಸಿದ ಸಚಿವರು, ಗ್ರಾಮೀಣ ಪ್ರದೇಶದಲ್ಲಿ ಹೋಂ ಐಸೋಲೇಶನ್‌ನಲ್ಲಿರುವವರ ಆರೋಗ್ಯದ ಬಗ್ಗೆ ಪ್ರತೀ ದಿನ ಪರಿಶೀಲಿಸಿ. ಅಗತ್ಯವಿದ್ದಲ್ಲಿ ಅವರಿಗೆ ಆಸ್ಪತ್ರೆ ದಾಖಲಾತಿ ಅಥವಾ ಕೋವಿಡ್ ಕೇರ್ ಸೆಂಟರ್‌ಗೆ ದಾಖಲು ಮಾಡುವ ಕುರಿತಂತೆ ಕ್ರವು ಕೈಗೊಳ್ಳಿ ಎಂದರು.

ಜಿಲ್ಲೆಯ ಕೋವಿಡ್ ಪರಿಸ್ಥಿತಿಯ ಕುರಿತು ಪ್ರತೀ ದಿನ ವರದಿ ನೀಡಬೇಕು. ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ಸಂಪರ್ಕಿಸುವಂತೆ ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿಗೆ ಸೂಚಿಸಿದರು.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಜಿಲ್ಲೆಯಲ್ಲಿ ಬೆಡ್‌ಗಳ ಕೊರತೆ ಯಾಗದಂತೆ ಪರಿಶೀಲಿಸಲು ಖಾಸಗಿ ಆಸ್ಪತ್ರೆವಾರು ನೋಡೆಲ್ ಅಧಿಕಾರಿಗಳನ್ನು ನಿಯೋಜಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು. ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕಾರ್ಪೋರೇಟ್ ಸಂಸ್ಥೆಗಳ ಸಿಎಸ್‌ಆರ್ ನಿಧಿಯಡಿ ಮತ್ತೊಂದು ಆಕ್ಸಿಜಿನ್ ಪ್ಲಾಂಟ್‌ಅಳವಡಿಸಲು ಹಾಗೂ ಕೋವಿಡ್ ಚಿಕಿತ್ಸೆಗೆ ಅಗತ್ಯವಿರುವ ಉಪಕರಣ ಗಳನ್ನು ಒದಗಿಸಲಾಗುವುದು ಎಂದರು.

ಸಭೆಯಲ್ಲಿ ಶಾಸಕರಾದ ರಘುಪತಿ ಭಟ್, ಸುನೀಲ್ ಕುಮಾರ್, ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್‌ಓ ಡಾ.ಸುಧೀರ್‌ ಚಂದ್ರ ಸೂಡಾ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಹೋಂ ಐಸೋಲೇಶನ್‌ನಲ್ಲಿ ಇರಲು ಅಗತ್ಯ ವ್ಯವಸ್ಥೆ ಇಲ್ಲದೇ ಇರುವವರಿಗೆ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರ್ ಗಳನ್ನು ಕೂಡಲೇ ತೆರೆಯಿರಿ. ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ವೈದ್ಯರು, ಶುಶ್ರೂಷಕರು ಮತ್ತು ಗ್ರೂಪ್ ಡಿ ಸಿಬ್ಬಂದಿಯನ್ನು ನಿಯೋಜಿಸಿ. ಆಯುಷ್ ವೈದ್ಯರ ಸೇವೆಯನ್ನು ಸಹ ಬಳಿಸಿಕೊಳ್ಳಿ. ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಜಿಲ್ಲಾಧಿಕಾರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ.

-ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News