ವಿಜಯಪುರದಲ್ಲಿ ಸಿಡಿಲು ಬಡಿದು ಮೂವರು ಮೃತ್ಯು: ಓರ್ವನಿಗೆ ಗಾಯ

Update: 2021-05-05 15:22 GMT
ಸಾಂದರ್ಭಿಕ ಚಿತ್ರ

ವಿಜಯಪುರ, ಮೇ 5: ಸಿಡಿಲು ಬಡಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಟಕ್ಕೆ ಬಳಿ ಇರುವ ಮಸೀದಿ ಸಮೀಪ ಬುಧವಾರ ಸಂಜೆ ನಡೆದಿದೆ.

ನಗರದಲ್ಲಿ ಇಂದು ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಈ ಸಂದರ್ಭದಲ್ಲಿ ಮಸೀದಿ ಹತ್ತಿರ ನಿಂತಿದ್ದ ಅಶೋಕ ಕಾರಜೋಳ (48) ಬಾದ್ ಶಾಹ್ ಕರಜಗಿ (40), ಜಾವಿದ್ ಜಲಗೇರಿ (33) ಎಂಬವರು ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಸಿಡಿಲು ಬಡಿದು ಇನ್ನೋರ್ವ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೇ ಜಾಗದಲ್ಲಿದ್ದ 4 ಕುರಿಗಳು ಕೂಡಾ ಸಿಡಿಲು ಬಡಿತದಿಂದ ಸಾವನ್ನಪ್ಪಿವೆ.

ಘಟನೆ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದಿದ್ದು, ಪಿಎಸ್ಐ ಆನಂದ ಟಕ್ಕಣ್ಣವರ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News