ಬ್ರಹ್ಮಾವರ: ಸಮುದಾಯ ಕೇಂದ್ರದಲ್ಲಿ ಕೊರೋನ ಸೋಂಕಿತರಿಗೆ ಚಿಕಿತ್ಸೆ

Update: 2021-05-05 17:03 GMT

ಬ್ರಹ್ಮಾವರ, ಮೇ 5: ಉಡುಪಿ ವಿಧಾನಸಭಾ ಕ್ಷೇತ್ರದಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೊರೋನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಶಾಸಕ ಕೆ. ರಘುಪತಿ ಭಟ್ ಬುಧವಾರ ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊರೋನ ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್ ಬೆಡ್ ಅಳವಡಿಸುವುದು ಹಾಗೂ ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಶೀಘ್ರದಲ್ಲಿ ಚಿಕಿತ್ಸೆ ಆರಂಭಿಸಲು ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ಆರೋಗ್ಯ ಅಧಿಕಾರಿಗಳ ಜೊತೆ ಚರ್ಚಿಸಲಾಯಿತು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ, ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ್ ಭಟ್, ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ. ಅಜಿತ್‌ಕುಮಾರ್ ಶೆಟ್ಟಿ, ಡಾ. ಪ್ರೇಮಾನಂದ್, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ವೀಣಾ ನಾಯ್ಕ್, ಜಿಪಂ ಮಾಜಿ ಸದಸ್ಯ ಪ್ರತಾಪ್ ಹೆಗ್ಡೆ ಮಾರಾಳಿ, ಸ್ಥಳೀಯ ಪ್ರಮುಖರಾದ ಬಿರ್ತಿ ರಾಜೇಶ್ ಶೆಟ್ಟಿ, ರಾಜೀವ್ ಕುಲಾಲ್, ಕಮಲಾಕ್ಷ ಹೆಬ್ಬಾರ್, ಹರೀಶ್ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News