ಕೊರೋನ ಪ್ರಕರಣ ಜಾಸ್ತಿಯಾದರೆ ಕಠಿಣ ಕ್ರಮ: ಸಚಿವ ಕೋಟ
Update: 2021-05-06 21:36 IST
ಉಡುಪಿ, ಮೇ 6: ಎಲ್ಲಾ ಶಾಸಕರು ಮಂತ್ರಿಗಳು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಕೊರೋನ ಪ್ರಕರಣಗಳ ಸಂಖ್ಯೆ ಹೆಚ್ಚಾದರೆ ವ್ಯವಸ್ಥೆಯನ್ನು ಇನ್ನಷ್ಟು ಕಠಿಣ ಗಳಿಸಬೇಕಾಗುತ್ತದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಾಕ್ಡೌನ್ ವಿಫಲ ಆಗಬಾರದು ಎಂಬುದು ನಮ್ಮ ಉದ್ದೇಶವಾಗಿದೆ. ಲಾಕ್ ಡೌನ್ ಯಶಸ್ವಿಗೊಳಿಸಲು ಎಲ್ಲರೂ ಜೊತೆಯಾಗಿ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.