ವನಜಾಕ್ಷಿ ಶಾಂತಾರಾಮ್

Update: 2021-05-07 15:10 GMT

ಉಡುಪಿ : ಎರಡು ಬಾರಿ ಉಡುಪಿ ನಗರಸಭೆಯ ಸದಸ್ಯೆಯಾಗಿದ್ದ, ಹಿರಿಯ ಬಿಜೆಪಿ ಕಾರ್ಯಕರ್ತೆ, ಉಡುಪಿ ಮಹಿಳಾ ಗ್ರಾಹಕರ ಸಹಕಾರ ಸಂಘದ ಸ್ಥಾಪಕ ಸದಸ್ಯೆ ವನಜಾಕ್ಷಿ ಶಾಂತಾರಾಮ್ ಅವರು ಗುರುವಾರ ಅಲ್ಪಕಾಲದ ಅಸೌಖ್ಯದಿಂದ ಉಡುಪಿಯ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 87 ವರ್ಷ ಪ್ರಾಯವಾಗಿತ್ತು.

ಉಡುಪಿ ತಾಲೂಕು ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆಯಾಗಿದ್ದ ವನಜಾಕ್ಷಿ ಅವರು 1985ರಿಂದ 1995ರವರೆಗೆ ಎರಡು ಅವಧಿಗೆ ನಗರ ಸಭಾ ಸದಸ್ಯೆಯಾಗಿ ಆಯ್ಕೆಯಾಗಿದ್ದರು. ವನಜಾಕ್ಷಿ ಅವರು ಪರಿಸರ ಹೋರಾಟಗಾರ ಪ್ರೇಮಾನಂದ ಕಲ್ಮಾಡಿ ಸೇರಿದಂತೆ ಐವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ವನಜಾಕ್ಷಿ ಅವರ ನಿಧನಕ್ಕೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ