ಜೆಡಿಎಸ್ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷ ಕೋವಿಡ್ಗೆ ಬಲಿ
Update: 2021-05-07 17:19 GMT
ಬೆಂಗಳೂರು, ಮೇ 7: ಕೋವಿಡ್ ಸೋಂಕಿಗೆ ಗುರಿಯಾಗಿ ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷ ಆನಂದ್(55) ಅವರು ಶುಕ್ರವಾರ ಬೆಳಗ್ಗೆ ವಿಕ್ಟೋರಿಯ ಆಸ್ಪತ್ರೆಯಲ್ಲಿ ನಿಧನರಾದರು.
ಹಲವು ವರ್ಷಗಳಲ್ಲಿಂದ ಆನಂದ್ ಜೆಡಿಎಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇತ್ತೀಚಿಗೆ ಅವರಿಗೆ ಕೊರೋನ ಸೋಂಕು ದೃಢಪಟ್ಟಿರುವ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಸಂತಾಪ: ಮೃತರು ಪತ್ನಿ ಹಾಗು ಮೂವರು ಮಕ್ಕಳನ್ನು ಅಗಲಿದ್ದಾರೆ. ಆನಂದ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಬೇಸರವಾಯಿತು. ಭಗವಂತ ಅವರ ಕುಟುಂಬದ ಸದಸ್ಯರಿಗೆ ಮತ್ತು ಹಿತೈಷಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಂತಾಪ ಸೂಚಿಸಿದ್ದಾರೆ