ಚಾಮರಾಜನಗರ: ಕುಂತೂರು ಗ್ರಾ.ಪಂ. ಅಧ್ಯಕ್ಷ ಕೋವಿಡ್ ಗೆ ಬಲಿ
Update: 2021-05-08 11:07 GMT
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕುಂತೂರು ಗ್ರಾ.ಪಂ. ಅಧ್ಯಕ್ಷ ಮಹದೇವ ಪ್ರಸಾದ್ (44) ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕಳೆದ 5 ದಿನಗಳ ಹಿಂದೆಯಷ್ಟೇ ಉಸಿರಾಟ ತೊಂದರೆಗೊಳಗಾಗಿ ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಕೊರೋನ ಸೋಂಕು ದೃಢಪಟ್ಟಿತ್ತು. ಆದರೆ ಶುಕ್ರವಾರ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.
ಕಳೆದ ಗ್ರಾಮ ಪಂ. ಚುನಾವಣೆಯಲ್ಲಿ ಆಯ್ಕೆಯಾಗಿ, ಮೂರು ತಿಂಗಳಿನಿಂದ ಗ್ರಾಪಂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರ ಅಂತ್ಯಕ್ರಿಯೆಯನ್ನು ಕೋವಿಡ್ ನಿಯಮಾವಳಿಯಂತೆ ಸ್ವಗ್ರಾಮವಾದ ಮಲ್ಲಹಳ್ಳಿಮಾಳದಲ್ಲಿ ನೆರವೇರಿಸಲಾಯಿತು.