ಶಿವಮೊಗ್ಗ: ವೆಂಟಿಲೇಟರ್ ಸಿಗದೆ ಕೊರೋನ ಸೋಂಕಿತ ವ್ಯಕ್ತಿ ಮೃತ್ಯು; ಆರೋಪ

Update: 2021-05-08 16:39 GMT
ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಮುಖ್ಯಮಂತ್ರಿ ತವರು ಜಿಲ್ಲೆಯಲ್ಲಿ ವೆಂಟಿಲೇಟರ್ ಸಿಗದೆ ಕೊರೋನ ಸೋಂಕಿತ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆನ್ನಲಾದ ಘಟನೆ ಇಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ.

ಶಿಕಾರಿಪುರದ ಆನಂದ (46) ಸಾವನ್ನಪ್ಪಿದ ವ್ಯಕ್ತಿ. ಕೋವಿಡ್ ಪಾಸಿಟಿವ್ ಹಿನ್ನಲೆಯಲ್ಲಿ ಇಂದು ಮೆಗ್ಗಾನ್ ಗೆ ದಾಖಲಾಗಿದ್ದರು. ಚಿಕಿತ್ಸೆಗೆ ದಾಖಲಾದ ಎರಡು ಗಂಟೆಯಿಂದ ವೆಂಟಿಲೇಟರ್ ಸಿಗದೇ ಒದ್ದಾಡಿ ದಾರುಣವಾಗಿ ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಸೋಂಕಿತನಿಗೆ ಆಕ್ಸಿಜನ್ ಸಾಕಾಗುತ್ತಿರಲಿಲ್ಲ ಎನ್ನಲಾಗಿದೆ. ಅಲ್ಲದೆ ಅವರನ್ನು ಐಸಿಯುನಲ್ಲಿ ದಾಖಲು ಮಾಡಿಕೊಳ್ಳಬೇಕಾದ ವೈದರು ಜನರಲ್ ವಾರ್ಡ್ ನಲ್ಲಿ ದಾಖಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News