ಅಗತ್ಯ ಕಾರಣಕ್ಕಾಗಿ ಮನೆಯ ಹತ್ತಿರ ವಾಹನ ಬಳಕೆ ಮಾಡಲು ಅನುಮತಿ: ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್

Update: 2021-05-10 17:35 GMT

ಬೆಂಗಳೂರು, ಮೇ.10: ರಾಜ್ಯ ಸರಕಾರ ಜಾರಿಗೊಳಿಸಿರುವ ಲಾಕ್ ಡೌನ್ ಮಾದರಿ ಮಾರ್ಗಸೂಚಿಯಲ್ಲಿ ಕೆಲ ಬದಲಾವಣೆ ಮಾಡಲಾಗಿದ್ದು, ಮನೆಯ ಹತ್ತಿರ ಸಂಚಾರ ನಡೆಸಲು ವಾಹನ ಬಳಕೆ ಮಾಡಲು ಅನುಮತಿ ನೀಡಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.

ಸೋಮವಾರ ಈ ಕುರಿತು ಟ್ವೀಟ್ ಮಾಡಲಾಗಿದ್ದು, ಮನೆಯ ಸುತ್ತಮುತ್ತಲೂ ತರಕಾರಿ, ದಿನಸಿ ತರಲು ವಾಹನ ಬಳಸಬಹುದು. ಅಗತ್ಯವಿದ್ದಾಗ ಮಾತ್ರ ಇದನ್ನು ಬಳಕೆ ಮಾಡಿ, ಎಲ್ಲೆಂದರಲ್ಲಿ ತಿರುಗಾಡಲು ಇದು ಪರವಾನಗಿ ಅಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಗ್ರಾಮೀಣ ಭಾಗದಲ್ಲಿ ಅಂಗಡಿಗಳು ಇರುವ ಪ್ರದೇಶಕ್ಕೆ ವಾಹನದಲ್ಲಿ ಹೋಗಿ ಅಗತ್ಯ ವಸ್ತುಗಳನ್ನು ಖರೀದಿ ಮಾಡಬಹುದು ಎಂದೂ ಟ್ವೀಟ್ ನಲ್ಲಿ ಉಲ್ಲೇಖಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News